Featured

ಬಂಟ್ವಾಳ: ಮಾಣಿಲ ಗ್ರಾ.ಪಂ. ಉಪಚುನಾವಣೆ : ಕಾಂಗ್ರೆಸ್‌ ಬೆಂಬಲಿತ ವಿಷ್ಣುಕುಮಾರ್‌ ಜಯ -Vishwanews24

ಬಂಟ್ವಾಳ: ಮಾಣಿಲ ಗ್ರಾ.ಪಂ. ಉಪಚುನಾವಣೆ : ಕಾಂಗ್ರೆಸ್‌ ಬೆಂಬಲಿತ ವಿಷ್ಣುಕುಮಾರ್‌ ಜಯ -Vishwanews24

ಬಂಟ್ವಾಳ, : ಸೋಮವಾರ ನಡೆದ ಮಾಣಿಲ ಗ್ರಾಪಂ ಉಪಚುನಾವಣೆಯ ಮತ ಎಣಿಕೆ ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಬುಧವಾರ ನಡೆದಿದ್ದು, ಕಾಂಗ್ರೆಸ್‌ ಬೆಂಬಲಿತ ವಿಷ್ಣುಕುಮಾರ್ ಕೊಮ್ಮುಂಜೆ ಜಯಗಳಿಸಿದ್ದಾರೆ.

ಈ ಹಿಂದೆ ನಡೆದ ಚುನಾವಣೆಯಲ್ಲಿ ರಾಜೇಶ್ ಕುಮಾರ್ ಬಾಳೆಕಲ್ಲು ಅವರು ಎರಡು ಸ್ಥಾನಗಳಲ್ಲಿ ಸ್ಪರ್ಧಿಸಿದ್ದರು. ಎರಡು ಸ್ಥಾನಗಳಲ್ಲಿಯೂ ಗೆಲುವು ಸಾಧಿಸಿದ ಕಾರಣದಿಂದಾಗಿ ಒಂದು ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ರಾಜೇಶ್ ಕುಮಾರ್ ಬಾಳೆಕಲ್ಲು ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಸಲಾಗಿತ್ತು.

ಇದನ್ನೂ ಓದಿ :ದೇಶಕ್ಕೆ ಬಿಜೆಪಿ ಆಡಳಿತದಿಂದ ಆಗಿರುವ ನೋವಿಗೆ ಹೋಲಿಸಿದರೆ ನನ್ನ ನೋವು ಏನೂ ಅಲ್ಲ : ಮಮತಾ ಬ್ಯಾನರ್ಜಿ -Vishwanews24

ಮಾಣಿಲದ ಒಂದು ಸ್ಥಾನಕ್ಕೆ ಎಂಟು ನಾಮಪತ್ರಗಳು ಸಲ್ಲಿಕೆ ಆಗಿದ್ದು ಈ ಪೈಕಿ ಐದು ನಾಮಪತ್ರಗಳನ್ನು ಹಿಂಪಡೆಯಲಾಗಿತ್ತು. ಪಕ್ಷೇತರ ಅಭ್ಯರ್ಥಿ ಮೊಯ್ದೀನ್ ಕುಞ, ಕಾಂಗ್ರೆಸ್‌ ಬೆಂಬಲಿತ ವಿಷ್ಣುಕುಮಾರ್ ಕೊಮ್ಮುಂಜೆ, ರಾಜೇಶ್ ಕುಮಾರ್ ಬಾಳೆಕಲ್ಲು ಬೆಂಬಲಿತ ಸೂರಜ್ ರೈ ಕೆಳಗಿನಮನೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

1025 ಮಂದಿ ಮತದಾರರಿರುವ ಮಾಣಿಲದಲ್ಲಿ 637 ಮತ ಚಲಾವಣೆಯಾಗಿದೆ. ಕಾಂಗ್ರೆಸ್‌ ಬೆಂಬಲಿತ ವಿಷ್ಣುಕುಮಾರ್ 364 ಮತ ಗಳಿಸಿ ಜಯ ಸಾಧಿಸಿದ್ದು, ರಾಜೇಶ್ ಕುಮಾರ್ ಬಾಳೆಕಲ್ಲು ಬೆಂಬಲಿತ ಸೂರಜ್ ರೈ ಕೆಳಗಿನಮನೆ 226 ಮತ ಗಳಿಸಿ ಪರಾಭವಗೊಂಡಿದ್ದಾರೆ. ಪಕ್ಷೇತರ ಅಭ್ಯರ್ಥಿ ಮೊಯ್ದೀನ್ ಕುಞ 41 ಮತ ಗಳಿಸಿದ್ದು 6 ಮತಗಳು ತಿರಸ್ಕೃತಗೊಂಡಿವೆ.

ಇದನ್ನೂ ಓದಿ :ಇನ್ಮುಂದೆ ರೈಲಿನಲ್ಲಿ ಮೊಬೈಲ್‌ ಹಾಗೂ ಎಲೆಕ್ಟ್ರಾನಿಕ್‌‌ ಉಪಕರಣಗಳ ಚಾರ್ಜಿಂಗ್ ನಿರ್ಬಂಧ : ಭಾರತೀಯ ರೈಲ್ವೆ -Vishwanews24

Vishwa News 24

Recent Posts

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ -vishwanews24

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…

2 minutes ago

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

4 days ago