Featured

ಬಂಟ್ವಾಳ: ಮಾಣಿಲ ಗ್ರಾ.ಪಂ. ಉಪಚುನಾವಣೆ : ಕಾಂಗ್ರೆಸ್‌ ಬೆಂಬಲಿತ ವಿಷ್ಣುಕುಮಾರ್‌ ಜಯ -Vishwanews24

ಬಂಟ್ವಾಳ: ಮಾಣಿಲ ಗ್ರಾ.ಪಂ. ಉಪಚುನಾವಣೆ : ಕಾಂಗ್ರೆಸ್‌ ಬೆಂಬಲಿತ ವಿಷ್ಣುಕುಮಾರ್‌ ಜಯ -Vishwanews24

ಬಂಟ್ವಾಳ, : ಸೋಮವಾರ ನಡೆದ ಮಾಣಿಲ ಗ್ರಾಪಂ ಉಪಚುನಾವಣೆಯ ಮತ ಎಣಿಕೆ ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಬುಧವಾರ ನಡೆದಿದ್ದು, ಕಾಂಗ್ರೆಸ್‌ ಬೆಂಬಲಿತ ವಿಷ್ಣುಕುಮಾರ್ ಕೊಮ್ಮುಂಜೆ ಜಯಗಳಿಸಿದ್ದಾರೆ.

ಈ ಹಿಂದೆ ನಡೆದ ಚುನಾವಣೆಯಲ್ಲಿ ರಾಜೇಶ್ ಕುಮಾರ್ ಬಾಳೆಕಲ್ಲು ಅವರು ಎರಡು ಸ್ಥಾನಗಳಲ್ಲಿ ಸ್ಪರ್ಧಿಸಿದ್ದರು. ಎರಡು ಸ್ಥಾನಗಳಲ್ಲಿಯೂ ಗೆಲುವು ಸಾಧಿಸಿದ ಕಾರಣದಿಂದಾಗಿ ಒಂದು ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ರಾಜೇಶ್ ಕುಮಾರ್ ಬಾಳೆಕಲ್ಲು ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಸಲಾಗಿತ್ತು.

ಇದನ್ನೂ ಓದಿ :ದೇಶಕ್ಕೆ ಬಿಜೆಪಿ ಆಡಳಿತದಿಂದ ಆಗಿರುವ ನೋವಿಗೆ ಹೋಲಿಸಿದರೆ ನನ್ನ ನೋವು ಏನೂ ಅಲ್ಲ : ಮಮತಾ ಬ್ಯಾನರ್ಜಿ -Vishwanews24

ಮಾಣಿಲದ ಒಂದು ಸ್ಥಾನಕ್ಕೆ ಎಂಟು ನಾಮಪತ್ರಗಳು ಸಲ್ಲಿಕೆ ಆಗಿದ್ದು ಈ ಪೈಕಿ ಐದು ನಾಮಪತ್ರಗಳನ್ನು ಹಿಂಪಡೆಯಲಾಗಿತ್ತು. ಪಕ್ಷೇತರ ಅಭ್ಯರ್ಥಿ ಮೊಯ್ದೀನ್ ಕುಞ, ಕಾಂಗ್ರೆಸ್‌ ಬೆಂಬಲಿತ ವಿಷ್ಣುಕುಮಾರ್ ಕೊಮ್ಮುಂಜೆ, ರಾಜೇಶ್ ಕುಮಾರ್ ಬಾಳೆಕಲ್ಲು ಬೆಂಬಲಿತ ಸೂರಜ್ ರೈ ಕೆಳಗಿನಮನೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

1025 ಮಂದಿ ಮತದಾರರಿರುವ ಮಾಣಿಲದಲ್ಲಿ 637 ಮತ ಚಲಾವಣೆಯಾಗಿದೆ. ಕಾಂಗ್ರೆಸ್‌ ಬೆಂಬಲಿತ ವಿಷ್ಣುಕುಮಾರ್ 364 ಮತ ಗಳಿಸಿ ಜಯ ಸಾಧಿಸಿದ್ದು, ರಾಜೇಶ್ ಕುಮಾರ್ ಬಾಳೆಕಲ್ಲು ಬೆಂಬಲಿತ ಸೂರಜ್ ರೈ ಕೆಳಗಿನಮನೆ 226 ಮತ ಗಳಿಸಿ ಪರಾಭವಗೊಂಡಿದ್ದಾರೆ. ಪಕ್ಷೇತರ ಅಭ್ಯರ್ಥಿ ಮೊಯ್ದೀನ್ ಕುಞ 41 ಮತ ಗಳಿಸಿದ್ದು 6 ಮತಗಳು ತಿರಸ್ಕೃತಗೊಂಡಿವೆ.

ಇದನ್ನೂ ಓದಿ :ಇನ್ಮುಂದೆ ರೈಲಿನಲ್ಲಿ ಮೊಬೈಲ್‌ ಹಾಗೂ ಎಲೆಕ್ಟ್ರಾನಿಕ್‌‌ ಉಪಕರಣಗಳ ಚಾರ್ಜಿಂಗ್ ನಿರ್ಬಂಧ : ಭಾರತೀಯ ರೈಲ್ವೆ -Vishwanews24

Vishwa News 24

Recent Posts

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

50 minutes ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

1 hour ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

1 hour ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

2 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

2 hours ago

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ -vishwanews24

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…

3 hours ago