ಬಂಟ್ವಾಳ: ಸ್ನೇಹಿತರ ಜೊತೆ ನೇತ್ರಾವತಿ ನದಿಗೆ ಮೀನು ಹಿಡಿಯಲು ಹೋಗಿ ನೀರುಪಾಲಾಗಿದ್ದ ವ್ಯಕ್ತಿಯ ಮೃತದೇಹ ಇಂದು ಪತ್ತೆಯಾಗಿದೆ.
ಮೃತರನ್ನು ಮೈಕಲ್ (53) ಎಂದು ಗುರುತಿಸಲಾಗಿದೆ.
ಸುರತ್ಕಲ್ ನ ಸರಪಾಡಿ ಸಮೀಪದ ಮಾವಿನ ಕಟ್ಟೆ ಎಂಬಲ್ಲಿಂದ ನೆಂಟರ ಮನೆಗೆ ಬಂದ ವ್ಯಕ್ತಿಗಳು ಸೇರಿದಂತೆ ನಾಲ್ಕು ಮಂದಿ ಗುರುವಾರ ಸಂಜೆ ಗಾಳ ಹಾಕಿ ಮೀನು ಹಿಡಿಯಲು ಬಂಟ್ವಾಳದ ಅಜಿಲಮೊಗರು ಸಮೀಪದ ಕೂಟೇಲು ಸೇತುವೆಯ ಸಮೀಪದ ಕಿಂಡಿ ಅಣೆಕಟ್ಟಿಗೆ ಹೋಗಿದ್ದರು. ಈ ವೇಳೆ ಮೈಕಲ್ ಆಯತಪ್ಪಿ ನೀರಿಗೆ ಬಿದ್ದಿದ್ದರು.
ಭಾರೀ ಮಳೆಯಿಂದ ನದಿ ಉಕ್ಕಿ ಹರಿಯುತ್ತಿದ್ದು ದೋಣಿಯ ಮೂಲಕ ಹುಡುಕಾಟ ನಡೆಸಿದರೂ ಪ್ರಯೋಜನವಾಗಿಲ್ಲ. ನಂತರ ಬಂಟ್ವಾಳ ಅಗ್ನಿಶಾಮಕ ದಳದವರು ಆಗಮಿಸಿ ಹುಡುಕಾಟ ನಡೆಸಿದರೂ ನೀರಿನ ಹರಿವು ಹೆಚ್ಚಾಗಿದ್ದರಿಂದ ಹಾಗೂ ಕತ್ತಲಾಗಿದ್ದರಿಂದ ಕಾರ್ಯಾಚರಣೆಗೆ ತೊಂದರೆಯಾಗಿತ್ತು. ಹಾಗಾಗಿ ಇಂದು ಬೆಳಗ್ಗೆ ಶೋಧಕಾರ್ಯ ಮುಂದುವರೆಸಿದ್ದು, ಮೃತದೇಹ ಪತ್ತೆಯಾಗಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…