ಬೆಳ್ತಂಗಡಿ: ಭಾರತ ಸರಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವಾಲಯದಿಂದ ಘೋಷಿಸಲಾದ ಪ್ರದಾನ ಮಂತ್ರಿ ಬಲ ಪುರಸ್ಕಾರ ಪ್ರಶಸ್ತಿ ಬೆಳ್ತಂಗಡಿಯ ಮೂರ್ಜೆ ಸುನಿತಾ ಪ್ರಭು ರವರಿಗೆ ಒಲಿದಿದೆ . ಈ ಪುರಸ್ಕಾರ ಒಂದು ಲಕ್ಷ ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ
ಪ್ರತಿಭಾನ್ವಿತೆಯಾಗಿರುವ ಈಕೆ 2019ರಲ್ಲಿ ಫಿನೀಕ್ಸ್ ( ಅಮೇರಿಕಾದಲ್ಲಿ ) ನಡೆದ 80 ನೇ ವಿಜ್ಞಾನ ಮತ್ತು ತಂತ್ರಜ್ಞಾನ ಮೇಳದಲ್ಲಿ ಭಾರತವನ್ನು ಪ್ರತಿನಿಧಿಸಿದ ಹಿನ್ನೆಲೆಯಲ್ಲಿ ಈ ಪುರಸ್ಕಾರ ಲಭಿಸಿದೆ
ಪ್ರಸಕ್ತ ಮಂಗಳೂರಿನ ಸಿ ಎಫ್ ಏ ಎಲ್ ವಿದ್ಯಾ ಸಂಸ್ಥೆಯಲ್ಲಿ ಪಿ ಯು ಸಿ ವ್ಯಾಸಂಗ ಮಾಡುತ್ತಿರುವ ಮೂರ್ಜೆ ಸುನಿತಾ ಪ್ರಭು ಬೆಳ್ತಂಗಡಿಯ ಉದ್ಯಮಿ ವಿನಾಯಕ ವುಡ್ ಇಂಡಸ್ಟ್ರೀಸ್ ನ ಮಾಲಕ ವಿವೇಕಾನಂದ ಪ್ರಭು ಮತ್ತು ಶಾಂತಲಾ ಪ್ರಭು ದಂಪತಿಯ ಪುತ್ರಿ ಉಜಿರೆ ಶ್ರೀ ಮಂಜುನಾಥೇಶ್ವರ ಸಿ ಬಿ ಯಸ್ ಸಿ ಶಾಲೆಯ ಹಳೆ ವಿದ್ಯಾರ್ಥಿನಿ.
ಜನವರಿ 22 ರಂದು ರಾಷ್ಟ್ರಪತಿ ಭವನದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳಾದ ರಮಾನಾಥ್ ಕೊವಿಂದ್ ರವರಿಂದ ಈ ಬಾಲ ಪುರಸ್ಕಾರ ಪಡೆಯಲಿದ್ದಾರೆ . ಜೊತೆಗೆ ಜನವರಿ 26 ರಂದು ರಾಷ್ಟ್ರ ರಾಜಧಾನಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡ್ನಲ್ಲೂ ಭಾಗವಹಿಸಲಿದ್ದು ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಹಾಗೂ ಪೋಷಕರಿಂದ ದೇಶ ವಿದೇಶಗಳ ಗಣ್ಯ ಅತಿಥಿಗಳನ್ನುಭೇಟಿಯಾಗುವ ಅವಕಾಶವಿದೆ .
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…