ಬಂಟ್ವಾಳ : ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ವಿಚಾರ ಮಂಥನ ಆಗಬೇಕು, ವಿರೋಧ ಪಕ್ಷದವರನ್ನು ಎದುರಿಸುವ ಬಲಿಷ್ಠ ಸೈನ್ಯ ನಮ್ಮಲ್ಲಿರಬೇಕು, ಯುವಕರನ್ನು ಪಕ್ಷಕ್ಷೆ ಆಕರ್ಷಿಸುವ ಮೂಲಕ ಮತ್ತೆ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ಕಾರ್ಯ ಆಗಬೇಕು ಎಂದು ಮಾಜಿ ಸಚಿವ ವಿನಯ್ಕುಮಾರ್ ಸೊರಕೆ ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದರು.
ಯುವ ಕಾಂಗ್ರೆಸ್ ಪಾಣೆಮಂಗಳೂರು ಬ್ಲಾಕ್ ವತಿಯಿಂದ ಸೋಮವಾರ ಸಂಜೆ ಮೊಡಂಕಾಪುವಿನ ಚರ್ಚ್ ಸಭಾಂಗಣದಲ್ಲಿ ನಡೆದ ಯುವ ಚೈತನ್ಯ ಕಾರ್ಯಗಾರ ಹಾಗೂ ಬೂತ್ ಹಾಗೂ ಗ್ರಾಮ ಸಮಿತಿ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಎಲ್ಲ ಜಾತಿ, ಧರ್ಮ, ಭಾಷೆ, ಸಂಸ್ಕೃತಿಯ ಜನರನ್ನು ಒಟ್ಟು ಸೇರಿಸುವ ಜೊತೆಗೆ ಜನರ ಬದುಕು ಕಟ್ಟುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದ್ದರೆ, ಧರ್ಮ, ಜಾತಿಯ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಬಂಟ್ವಾಳ ಕ್ಷೇತ್ರದಲ್ಲಿ ರಮನಾಥ ರೈ ಮಾಡಿದ ಅಭಿವೃದ್ದಿ ಕಾರ್ಯಕ್ರಮಗಳನ್ನು ಮರೆ ಮಾಚಲು ಯಾರಿಂದಲೂ ಸಾಧ್ಯವಿಲ್ಲ. ಭಾವನಾತ್ಮಕ ವಿಚಾರಗಳ ಮೂಲಕ ಜನರನ್ನು ಮರಳು ಗೊಳಿಸಲಾಗುತ್ತಿದೆ, ಜಾತ್ಯತೀತ ಶಕ್ತಿ ಕ್ಷೀಣಿಸಿದಾಗ ಕೋಮುಶಕ್ತಿಗಳು ಬಲಗೊಳ್ಳುತ್ತದೆ ಎಂದರು. ಇದೇ ಸಂದರ್ಭ ಯುವ ಕಾಂಗ್ರೆಸ್ ಸದಸ್ಯತ್ವ ಅಭಿಯಾನದ ಪೋಸ್ಟರ್ ಬಿಡುಗಡೆ ಮಾಡಿದರು..
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ ಮಾತನಾಡಿ ಮನುವಾದವನ್ನು ಸಮಾಜದಲ್ಲಿ ಜಾರಿಗೊಳಿಸಲು ಗಾಂಧೀಜಿಯ ಹತ್ಯೆಯಾಯಿತು. ಇಂದಿಗೂ ನಮ್ಮ ನಡುವೆ ಮನುವಾದಿಗಳು, ಗೋಡ್ಸೆವಾದಿಗಳು ಇದ್ದಾರೆ. ಇಂತವರ ವಿರುದ್ಧ ಸೈದ್ದಾಂತಿಕ ಹೋರಾಟ ಮಾಡಬೇಕಾಗಿದೆ. ಸಂವಿಧಾನ ವಿರೋಧಿಗಳನ್ನು ನಾವು ಎಂದಿಗೂ ವಿರೋಧಿಸುತ್ತೇವೆ ಎಂದು ತಿಳಿಸಿದರು.
ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…
ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…
ಕರ್ನಾಟಕದಲ್ಲಿ ಹೆಚ್ಚುತ್ತಿರುವ H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…
ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…
ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…
ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…