ಬಂಟ್ವಾಳ : ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ವಿಚಾರ ಮಂಥನ ಆಗಬೇಕು, ವಿರೋಧ ಪಕ್ಷದವರನ್ನು ಎದುರಿಸುವ ಬಲಿಷ್ಠ ಸೈನ್ಯ ನಮ್ಮಲ್ಲಿರಬೇಕು, ಯುವಕರನ್ನು ಪಕ್ಷಕ್ಷೆ ಆಕರ್ಷಿಸುವ ಮೂಲಕ ಮತ್ತೆ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ಕಾರ್ಯ ಆಗಬೇಕು ಎಂದು ಮಾಜಿ ಸಚಿವ ವಿನಯ್ಕುಮಾರ್ ಸೊರಕೆ ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದರು.
ಯುವ ಕಾಂಗ್ರೆಸ್ ಪಾಣೆಮಂಗಳೂರು ಬ್ಲಾಕ್ ವತಿಯಿಂದ ಸೋಮವಾರ ಸಂಜೆ ಮೊಡಂಕಾಪುವಿನ ಚರ್ಚ್ ಸಭಾಂಗಣದಲ್ಲಿ ನಡೆದ ಯುವ ಚೈತನ್ಯ ಕಾರ್ಯಗಾರ ಹಾಗೂ ಬೂತ್ ಹಾಗೂ ಗ್ರಾಮ ಸಮಿತಿ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಎಲ್ಲ ಜಾತಿ, ಧರ್ಮ, ಭಾಷೆ, ಸಂಸ್ಕೃತಿಯ ಜನರನ್ನು ಒಟ್ಟು ಸೇರಿಸುವ ಜೊತೆಗೆ ಜನರ ಬದುಕು ಕಟ್ಟುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದ್ದರೆ, ಧರ್ಮ, ಜಾತಿಯ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಬಂಟ್ವಾಳ ಕ್ಷೇತ್ರದಲ್ಲಿ ರಮನಾಥ ರೈ ಮಾಡಿದ ಅಭಿವೃದ್ದಿ ಕಾರ್ಯಕ್ರಮಗಳನ್ನು ಮರೆ ಮಾಚಲು ಯಾರಿಂದಲೂ ಸಾಧ್ಯವಿಲ್ಲ. ಭಾವನಾತ್ಮಕ ವಿಚಾರಗಳ ಮೂಲಕ ಜನರನ್ನು ಮರಳು ಗೊಳಿಸಲಾಗುತ್ತಿದೆ, ಜಾತ್ಯತೀತ ಶಕ್ತಿ ಕ್ಷೀಣಿಸಿದಾಗ ಕೋಮುಶಕ್ತಿಗಳು ಬಲಗೊಳ್ಳುತ್ತದೆ ಎಂದರು. ಇದೇ ಸಂದರ್ಭ ಯುವ ಕಾಂಗ್ರೆಸ್ ಸದಸ್ಯತ್ವ ಅಭಿಯಾನದ ಪೋಸ್ಟರ್ ಬಿಡುಗಡೆ ಮಾಡಿದರು..
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ ಮಾತನಾಡಿ ಮನುವಾದವನ್ನು ಸಮಾಜದಲ್ಲಿ ಜಾರಿಗೊಳಿಸಲು ಗಾಂಧೀಜಿಯ ಹತ್ಯೆಯಾಯಿತು. ಇಂದಿಗೂ ನಮ್ಮ ನಡುವೆ ಮನುವಾದಿಗಳು, ಗೋಡ್ಸೆವಾದಿಗಳು ಇದ್ದಾರೆ. ಇಂತವರ ವಿರುದ್ಧ ಸೈದ್ದಾಂತಿಕ ಹೋರಾಟ ಮಾಡಬೇಕಾಗಿದೆ. ಸಂವಿಧಾನ ವಿರೋಧಿಗಳನ್ನು ನಾವು ಎಂದಿಗೂ ವಿರೋಧಿಸುತ್ತೇವೆ ಎಂದು ತಿಳಿಸಿದರು.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…