Featured

ಬಂಟ್ವಾಳ : ಯುವಕರನ್ನು ಪಕ್ಷಕ್ಷೆ ಆಕರ್ಷಿಸುವ ಮೂಲಕ ಮತ್ತೆ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ಕಾರ್ಯ ಆಗಬೇಕು : ವಿನಯ್‌ ಕುಮಾರ್ ಸೊರಕೆ – Vishwanews24

ಬಂಟ್ವಾಳ : ಯುವಕರನ್ನು ಪಕ್ಷಕ್ಷೆ ಆಕರ್ಷಿಸುವ ಮೂಲಕ ಮತ್ತೆ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ಕಾರ್ಯ ಆಗಬೇಕು : ವಿನಯ್‌ ಕುಮಾರ್ ಸೊರಕೆ – Vishwanews24

ಬಂಟ್ವಾಳ : ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ವಿಚಾರ ಮಂಥನ ಆಗಬೇಕು, ವಿರೋಧ ಪಕ್ಷದವರನ್ನು ಎದುರಿಸುವ ಬಲಿಷ್ಠ ಸೈನ್ಯ ನಮ್ಮಲ್ಲಿರಬೇಕು, ಯುವಕರನ್ನು ಪಕ್ಷಕ್ಷೆ ಆಕರ್ಷಿಸುವ ಮೂಲಕ ಮತ್ತೆ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ಕಾರ್ಯ ಆಗಬೇಕು ಎಂದು ಮಾಜಿ ಸಚಿವ ವಿನಯ್‌ಕುಮಾರ್ ಸೊರಕೆ ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದರು.

ಯುವ ಕಾಂಗ್ರೆಸ್ ಪಾಣೆಮಂಗಳೂರು ಬ್ಲಾಕ್ ವತಿಯಿಂದ ಸೋಮವಾರ ಸಂಜೆ ಮೊಡಂಕಾಪುವಿನ ಚರ್ಚ್ ಸಭಾಂಗಣದಲ್ಲಿ ನಡೆದ ಯುವ ಚೈತನ್ಯ ಕಾರ್ಯಗಾರ ಹಾಗೂ ಬೂತ್ ಹಾಗೂ ಗ್ರಾಮ ಸಮಿತಿ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಎಲ್ಲ ಜಾತಿ, ಧರ್ಮ, ಭಾಷೆ, ಸಂಸ್ಕೃತಿಯ ಜನರನ್ನು ಒಟ್ಟು ಸೇರಿಸುವ ಜೊತೆಗೆ ಜನರ ಬದುಕು ಕಟ್ಟುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದ್ದರೆ, ಧರ್ಮ, ಜಾತಿಯ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಬಂಟ್ವಾಳ ಕ್ಷೇತ್ರದಲ್ಲಿ ರಮನಾಥ ರೈ ಮಾಡಿದ ಅಭಿವೃದ್ದಿ ಕಾರ್ಯಕ್ರಮಗಳನ್ನು ಮರೆ ಮಾಚಲು ಯಾರಿಂದಲೂ ಸಾಧ್ಯವಿಲ್ಲ. ಭಾವನಾತ್ಮಕ ವಿಚಾರಗಳ ಮೂಲಕ ಜನರನ್ನು ಮರಳು ಗೊಳಿಸಲಾಗುತ್ತಿದೆ, ಜಾತ್ಯತೀತ ಶಕ್ತಿ ಕ್ಷೀಣಿಸಿದಾಗ ಕೋಮುಶಕ್ತಿಗಳು ಬಲಗೊಳ್ಳುತ್ತದೆ ಎಂದರು. ಇದೇ ಸಂದರ್ಭ ಯುವ ಕಾಂಗ್ರೆಸ್ ಸದಸ್ಯತ್ವ ಅಭಿಯಾನದ ಪೋಸ್ಟರ್ ಬಿಡುಗಡೆ ಮಾಡಿದರು..

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ ಮಾತನಾಡಿ ಮನುವಾದವನ್ನು ಸಮಾಜದಲ್ಲಿ ಜಾರಿಗೊಳಿಸಲು ಗಾಂಧೀಜಿಯ ಹತ್ಯೆಯಾಯಿತು. ಇಂದಿಗೂ ನಮ್ಮ ನಡುವೆ ಮನುವಾದಿಗಳು, ಗೋಡ್ಸೆವಾದಿಗಳು ಇದ್ದಾರೆ. ಇಂತವರ ವಿರುದ್ಧ ಸೈದ್ದಾಂತಿಕ ಹೋರಾಟ ಮಾಡಬೇಕಾಗಿದೆ. ಸಂವಿಧಾನ ವಿರೋಧಿಗಳನ್ನು ನಾವು ಎಂದಿಗೂ ವಿರೋಧಿಸುತ್ತೇವೆ ಎಂದು ತಿಳಿಸಿದರು.

Vishwa News 24

Recent Posts

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

39 minutes ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

2 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

3 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

3 hours ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

3 hours ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

3 hours ago