ಬಂಟ್ವಾಳ: ಸಂಬಂಧಿಕರ ಮನೆಗೆ ಹೋಗುವುದಾಗಿ ಮನೆಯಿಂದ ಹೊರಗೆ ಹೋದ ಹದಿಹರೆಯದ ಯುವತಿಯೋರ್ವಳು ವಾಪಸು ಮನೆಗೆ ಬಾರದೆ ಕಾಣೆಯಾಗಿದ್ದಾಳೆ ಎಂದು ಈಕೆಯ ತಾಯಿ ಗಿರಿಜಾ ಅವರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ನಿವಾಸಿ ಗಿರಿಜ ಅವರ ದ್ವೀತಿಯ ಮಗಳು ಹರ್ಷಿತಾ (18) ಕಾಣೆಯಾದ ಯುವತಿ.
ಹರ್ಷಿತಾ ಎಸ್.ಎಸ್.ಎಲ್.ಸಿ.ವರೆಗೆ ಶಿಕ್ಷಣವನ್ನು ಅರ್ಧದಲ್ಲಿ ನಿಲ್ಲಿಸಿ ಮನೆಯಲ್ಲಿದ್ದಳು. ಸೆ.16 ರಂದು ರಾತ್ರಿ ಎಂದಿನಂತೆ ಊಟ ಮಾಡಿ ರಾತ್ರಿ 11.30 ರ ಗಂಟೆಗೆ ಸಮೀಪವಿರುವ ಅಕ್ಕನಾದ ಜಯಂತಿ ಅವರ ಮನೆಗೆ ಹೋಗುವುದಾಗಿ ತಿಳಿಸಿ ಹೋಗಿದ್ದಳು. ಬೆಳಿಗ್ಗೆ ಬರುವುದಾಗಿ ತಿಳಿಸಿ ಹೋಗಿದ್ದ ಯುವತಿ ಬರದೆ ಇದ್ದಾಗ ಅವರ ಮನೆಗೆ ತೆರಳಿ ವಿಚಾರಿಸಿದಾಗ ಅವಳು ಮನೆಗೆ ಬಂದಿಲ್ಲವೆಂದು ತಿಳಿಸಿದ್ದಾರೆ.
ಕಾಣೆಯಾದ ಹರ್ಷಿತಾ ಇದೇ ತಿಂಗಳ ಸೆ. 4 ರಂದು ಮನೆಯಲ್ಲಿ ಯಾರಿಗೂ ಹೇಳದೆ ಹೋಗಿದ್ದು, ಮರುದಿನ ಬಂದಿದ್ದಳು. ಅ ವೇಳೆ ವಿಚಾರಿಸಿದಾಗ ಇವಳ ಸ್ನೇಹಿತೆ ಬಿಸಿರೋಡಿನ ದೀಪಿಕಾಳ ಮನೆಗೆ ಹೋಗಿದ್ದೆ ಎಂದು ತಿಳಿಸಿದ್ದಳು. ಹಾಗಾಗಿ ಈ ಬಾರಿಯೂ ಅವಳ ಮನೆಗೆ ತೆರಳಿರಬಹುದು ಎಂದು ಅಂದಾಜಿಸಿ ಅವಳಲ್ಲಿ ವಿಚಾರಿಸಿದಾಗ ಅಲ್ಲಿಗೂ ಬಂದಿಲ್ಲ ಎಂದು ತಿಳಿಸಿದ್ದಾಳೆ.
ಮನೆಗೆ ಬರಬಹುದು ಎಂದು ಕಾದ ಬಳಿಕ ಬಳಿಕ ಸೆ.19 ರಂದು ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದಾರೆ.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…