ಬಂಟ್ವಾಳ: ಸಂಬಂಧಿಕರ ಮನೆಗೆ ಹೋಗುವುದಾಗಿ ಮನೆಯಿಂದ ಹೊರಗೆ ಹೋದ ಹದಿಹರೆಯದ ಯುವತಿಯೋರ್ವಳು ವಾಪಸು ಮನೆಗೆ ಬಾರದೆ ಕಾಣೆಯಾಗಿದ್ದಾಳೆ ಎಂದು ಈಕೆಯ ತಾಯಿ ಗಿರಿಜಾ ಅವರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ನಿವಾಸಿ ಗಿರಿಜ ಅವರ ದ್ವೀತಿಯ ಮಗಳು ಹರ್ಷಿತಾ (18) ಕಾಣೆಯಾದ ಯುವತಿ.
ಹರ್ಷಿತಾ ಎಸ್.ಎಸ್.ಎಲ್.ಸಿ.ವರೆಗೆ ಶಿಕ್ಷಣವನ್ನು ಅರ್ಧದಲ್ಲಿ ನಿಲ್ಲಿಸಿ ಮನೆಯಲ್ಲಿದ್ದಳು. ಸೆ.16 ರಂದು ರಾತ್ರಿ ಎಂದಿನಂತೆ ಊಟ ಮಾಡಿ ರಾತ್ರಿ 11.30 ರ ಗಂಟೆಗೆ ಸಮೀಪವಿರುವ ಅಕ್ಕನಾದ ಜಯಂತಿ ಅವರ ಮನೆಗೆ ಹೋಗುವುದಾಗಿ ತಿಳಿಸಿ ಹೋಗಿದ್ದಳು. ಬೆಳಿಗ್ಗೆ ಬರುವುದಾಗಿ ತಿಳಿಸಿ ಹೋಗಿದ್ದ ಯುವತಿ ಬರದೆ ಇದ್ದಾಗ ಅವರ ಮನೆಗೆ ತೆರಳಿ ವಿಚಾರಿಸಿದಾಗ ಅವಳು ಮನೆಗೆ ಬಂದಿಲ್ಲವೆಂದು ತಿಳಿಸಿದ್ದಾರೆ.
ಕಾಣೆಯಾದ ಹರ್ಷಿತಾ ಇದೇ ತಿಂಗಳ ಸೆ. 4 ರಂದು ಮನೆಯಲ್ಲಿ ಯಾರಿಗೂ ಹೇಳದೆ ಹೋಗಿದ್ದು, ಮರುದಿನ ಬಂದಿದ್ದಳು. ಅ ವೇಳೆ ವಿಚಾರಿಸಿದಾಗ ಇವಳ ಸ್ನೇಹಿತೆ ಬಿಸಿರೋಡಿನ ದೀಪಿಕಾಳ ಮನೆಗೆ ಹೋಗಿದ್ದೆ ಎಂದು ತಿಳಿಸಿದ್ದಳು. ಹಾಗಾಗಿ ಈ ಬಾರಿಯೂ ಅವಳ ಮನೆಗೆ ತೆರಳಿರಬಹುದು ಎಂದು ಅಂದಾಜಿಸಿ ಅವಳಲ್ಲಿ ವಿಚಾರಿಸಿದಾಗ ಅಲ್ಲಿಗೂ ಬಂದಿಲ್ಲ ಎಂದು ತಿಳಿಸಿದ್ದಾಳೆ.
ಮನೆಗೆ ಬರಬಹುದು ಎಂದು ಕಾದ ಬಳಿಕ ಬಳಿಕ ಸೆ.19 ರಂದು ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…