ಬಂಟ್ವಾಳ: ಮೆಲ್ಕಾರ್ – ಮುಡಿಪು ರಾಜ್ಯ ಹೆದ್ದಾರಿಯ ಸಜಿಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ದ್ವಿಚಕ್ರ ವಾಹನ ಸವಾರ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದಾರೆ.
ಬರಿಮಾರು ನಿವಾಸಿ ಸರ್ಫ್ರಾಝ್ ( 33) ಮೃತಪಟ್ಟ ಯುವಕ. ಬೈಕ್ ಸವರಳಾಗಿದ್ದ ಸಹೋದರಿ ಜಾಸ್ಮೀನ್ (18) ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸರ್ಫ್ರಾಝ್ ವಿದ್ಯಾರ್ಥಿನಿಯಾಗಿರುವ ತಂಗಿ ಜಾಸ್ಮೀನ್ ರನ್ನು ಬುಧವಾರ ಬೆಳಗ್ಗೆ ದೇರಳಕಟ್ಟೆಯ ಕಾಲೇಜಿಗೆ ಸ್ಕೂಟರ್ ನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಮೆಲ್ಕಾರ್ ನಿಂದ ಮುಡಿಪು ಮಾರ್ಗವಾಗಿ ಮಾರ್ನಬೈಲು ತಲುಪಿದಾಗ ಇವರ ಸ್ಕೂಟರ್ ಗೆ ಎದುರಿನಿಂದ ಇಮ್ತಿಯಾಝ್ ಎಂಬಾತ ಚಲಾಯಿಸಿಕೊಂಡು ಬಂದ ಬೈಕ್ ಢಿಕ್ಕಿ ಹೊಡೆದಿತ್ತು. ಇದರಿಂದ ಸ್ಕೂಟರ್ ನಲ್ಲಿದ್ದ ರಸ್ತೆಗೆ ಎಸೆಯಲ್ಪಟ್ಟಿದ್ದರು.
ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಸರ್ಫ್ರಾಝ್ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…