Featured

ಬಂಟ್ವಾಳ : ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಾರು ಢಿಕ್ಕಿ – ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಮೃತ್ಯು – vishwanews24

ಬಂಟ್ವಾಳ : ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಾರು ಢಿಕ್ಕಿ – ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಮೃತ್ಯು

ಬಂಟ್ವಾಳ: ಪಾದಚಾರಿ ಯುವತಿಯೋರ್ವಳಿಗೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದವಳು ಮಧ್ಯರಾತ್ರಿ ವೇಳೆ ಮೃತಪಟ್ಟ ಘಟನೆ ನಡೆದಿದೆ.

ಬಿಸಿರೋಡಿನ ಕೈಕಂಬ ‌ಸಮೀಪದ ಪಚ್ಚಿನಡ್ಕ ಎಂಬಲ್ಲಿ ರಾತ್ರಿ 8 ಗಂಟೆ ವೇಳೆ ಅಪಘಾತ ನಡೆದಿತ್ತು. ಇಲ್ಲಿನ ಸ್ಥಳೀಯ ‌ನಿವಾಸಿ ಚೈತ್ರ (22 ) ಮೃತಪಟ್ಟ ಯುವತಿ.

ಮಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿರುವ ಚೈತ್ರ ಸಂಜೆ ಕೆಲಸ ಬಿಟ್ಟು ಬಸ್ ನಿಂದ ಇಳಿದು ತಾಯಿ ಜೊತೆಗೆ ಮನೆಯ ಕಡೆಯ ತೆರಳುತ್ತಿದ್ದ ವೇಳೆ ಅಪಘಾತ ನಡೆದಿದೆ ಎಂದು ಆರಂಭದಲ್ಲಿ ಹೇಳಲಾಗಿತ್ತು. ಸ್ನೇಹಿತೆಯೋರ್ವಳ ಮದುವೆಯ ರೋಸ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಹಿನ್ನಲೆಈಕೆ ಕೆಲಸಕ್ಕೆ ರಜೆ ಪಡೆದುಕೊಂಡು ಸಂಜೆ ವೇಳೆ ಮನೆಯಿಂದ ತಾಯಿ ಜೊತೆ ನಡೆದುಕೊಂಡು ಹೋಗುತ್ತಿದ್ದಳು ಎಂದು ಸಂಬಂಧಿಕರು ತಿಳಿಸಿದ್ದಾರೆ.

ತಾಯಿ ಜೊತೆ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದ ಸ್ವಿಫ್ಟ್ ಕಾರು ಚೈತ್ರಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ಪರಿಣಾಮ ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಇವಳನ್ನು ಖಾಸಗಿ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ಟ್ರಾಫಿಕ್ ಎ.ಎಸ್.ಐ.ಸುರೇಶ್ ಪಡಾರ್ ಹಾಗೂ ಹೆಚ್.ಸಿ.ರಮೇಶ್ ಖಾಸಗಿ ವಾಹನದ ಮೂಲಕ ಗಾಯಳುವನ್ನು ಮಂಗಳೂರು ‌ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.

ಗಂಭೀರ ಗಾಯಗೊಂಡ ಈಕೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ಮಧ್ಯರಾತ್ರಿ ಸುಮಾರು 1 ಗಂಟೆಗೆ ಈಕೆ ಮೃತಪಟ್ಟ ಬಗ್ಗೆ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪಾದಾಚಾರಿಗೆ ಡಿಕ್ಕಿ ಹೊಡೆದ ಕಾರು ಬಳಿಕ ನಿಯಂತ್ರಣ ಕಳೆದುಕೊಂಡು ಅಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ಮನೆಯೊಂದರ ಕಾಂಪೌಂಡ್ ಗೆ ಕೂಡ ಗುದ್ದಿ ನಿಂತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಕಾರು ಚಾಲಕ ಹಾಗೂ ಆತನ ಜೊತೆಯಿದ್ದ ಮೂವರು ಸಹ ಪ್ರಯಾಣಿಕ ಪರಾರಿಯಾಗಿದ್ದು, ಮಲ್ಲೂರು ಕಡೆ ಹೋಗುವವರು ಎಂದು ಹೇಳಲಾಗಿದೆ.

ಮೆಲ್ಕಾರ್ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ‌ಭೇಟಿಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮದುವೆಗೆ ನಿಶ್ಚಿತಾರ್ಥ ನಡೆದಿತ್ತು:

‌‌‌ಚೈತ್ರ ಖ್ಯಾತ ಮೇಕಪ್ ಆರ್ಟಿಸ್ಟ್ ದಿ. ಭಾಸ್ಕರ್ ಆಚಾರ್ಯ ಅವರ ಮಗಳು. ಈಕೆ ಮಂಗಳೂರಿನ‌ ಪ್ರಸಿದ್ದ ಬಟ್ಟೆ ಮಳಿಗೆಯೊಂದರಲ್ಲಿ ಕೆಲಸ ಮಾಡುತ್ತಿದ್ದು, ನಿನ್ನೆ ರಜಾ ಪಡೆದುಕೊಂಡಿದ್ದಳು.

ಇವಳ ಸ್ನೇಹಿತೆಯೋರ್ವಳ ರೋಸ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಉದ್ದೇಶದಿಂದ ತಾಯಿ ಜೊತೆ ಅವಳ ಮನೆಗೆ ಹೋಗುತ್ತಿದ್ದ ವೇಳೆ ಕಾರು ಇವಳಿಗೆ ಡಿಕ್ಕಿ ಹೊಡೆದಿದೆ.

ಚೈತ್ರಳಿಗೆ ನಿಶ್ಚಿತಾರ್ಥ ನಡೆದು ಮಾ.3 ರಂದು ಕೊಡ್ಯಡ್ಕದ ಯುವಕನ ಜೊತೆ ಮದುವೆ ನಿಗದಿಯಾಗಿತ್ತು. ಇದೀಗ ಮದುವೆಯಾಗಿ ಗಂಡನ ಮನೆಗೆ ಹೋಗಬೇಕಿದ್ದ ಯುವತಿಯನ್ನು ಕಾರೊಂದು ಮಸಣ ಸೇರುವಂತೆ ಮಾಡಿದೆ.

ಗಾಂಜಾ ಸೇವಸಿದ್ದರಾ?

ಗಾಂಜಾ ಸೇವನೆ ಮಾಡಿ ಕಾರು ಓಡಿಸುತ್ತಿದ್ದುದೇ ಅಪಘಾತಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಈ ಬಗ್ಗೆ ಪೊಲೀಸರಿಗೆ ಸಂಬಂಧಿಕರು ದೂರು ನೀಡಿದ್ದು, ಪೋಲಿಸರು ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

4 days ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

4 days ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

4 days ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

4 days ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

4 days ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

4 days ago