ಬಂಟ್ವಾಳ: ದೇಶದ ಕೋಟ್ಯಂತರ ಜನರ ಆಶೋತ್ತರವಾಗಿ ಜಾಗತಿಕ ಮಟ್ಟದಲ್ಲಿ ದೇಶದ ಕೀರ್ತಿಯನ್ನು ಉತ್ತುಂಗಕ್ಕೇರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಲು ನಡೆಸಿದ ರುದ್ರಯಾಗ ಫಲಿಸುತ್ತದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಅವರು ಹೇಳಿದರು.
ಬಂಟ್ವಾಳ ತಾಲೂಕಿನ ಕಕ್ಕೆಪದವು ಎಂಬಲ್ಲಿ ಯಾಗ ನಡೆದಿದ್ದು ಸ್ಥಳೀಯ ಸಂಘಟನೆ ರಾಮಾಂಜನೇಯ ಗೆಳೆಯರ ಬಳಗದ ವತಿಯಿಂದ ಆಯೋಜನೆ ಮಾಡಲಾಗಿತ್ತು. ಶ್ರೀ ರಾಮಾಂಜನೇಯ ಭಜನಾ ಮಂದಿರದ 4ನೇ ವರ್ಷದ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಸಂಕಲ್ಪದಡಿ ಬುಧವಾರ ನಡೆದ ರುದ್ರಯಾಗದ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಯಾಗದ ಪೂರ್ಣಾಹುತಿ ಕಾರ್ಯ ನಿಗದಿಯಾಗಿತ್ತು. ಆದರೆ ಕೊನೆಕ್ಷಣದಲ್ಲಿ ಬಿಎಸ್ವೈ ಗೈರಾಗಿದ್ದರಿಂದ ಸಂಸದ ನಳಿನ್ ಕುಮಾರ್ ಯಾಗದ ಪೂರ್ಣಾಹುತಿ ನೆರವೇರಿಸಿದ್ದಾರೆ. ದೇಶಕ್ಕಾಗಿ ತನ್ನ ಜೀವನವನ್ನು ಮುಡಿಪಾಗಿರಿಸಿದ ನರೇಂದ್ರ ಮೋದಿ ಅವರು ಮುಂದಕ್ಕೂ ಪ್ರಧಾನಿಯಾಗುವಂತೆ ಕೈ ಜೋಡಿಸಬೇಕು ಎಂದರು.
ಬಲಿಷ್ಠ ಭಾರತ ನಿರ್ಮಿಸಲು ಶ್ರೀರಾಮಾಂಜನೇಯ ದೇವರ, ಶ್ರೀ ಕಾರಿಂಜೇಶ್ವರ ದೇವರ ಮತ್ತು ಮೈರ ಶ್ರೀ ಮಹಾಕಾಳಿ ಅಮ್ಮನವರ ಅನುಗ್ರಹ ಪ್ರಧಾನಿಗೆ ಇರಲೆಂಬ ಆಶಯದಲ್ಲಿ ಎಲ್ಲರೂ ಒಟ್ಟಾಗಿ ಈ ಯಾಗ ನೆರವೇರಿಸಲಾಗಿದೆ ಎಂದು ಗೆಳೆಯರ ಬಳಗದ ಮಾಜಿ ಅಧ್ಯಕ್ಷ ರಂಜಿತ್ ಮೈರ ತಿಳಿಸಿದ್ದಾರೆ.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಸೇರಿದಂತೆ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…