Featured

ಬಂಟ್ವಾಳ ರಾಮಾಂಜನೇಯ ಗೆಳೆಯರ ಬಳಗದ ವತಿಯಿಂದ ಮೋದಿ ಮತ್ತೆ ಪ್ರಧಾನಿಯಾಗಲು ಮಹಾರುದ್ರಯಾಗ

ಬಂಟ್ವಾಳ: ದೇಶದ ಕೋಟ್ಯಂತರ ಜನರ ಆಶೋತ್ತರವಾಗಿ ಜಾಗತಿಕ ಮಟ್ಟದಲ್ಲಿ ದೇಶದ ಕೀರ್ತಿಯನ್ನು ಉತ್ತುಂಗಕ್ಕೇರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಲು ನಡೆಸಿದ ರುದ್ರಯಾಗ ಫಲಿಸುತ್ತದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಅವರು ಹೇಳಿದರು.

ಬಂಟ್ವಾಳ ತಾಲೂಕಿನ ಕಕ್ಕೆಪದವು ಎಂಬಲ್ಲಿ ಯಾಗ ನಡೆದಿದ್ದು ಸ್ಥಳೀಯ ಸಂಘಟನೆ ರಾಮಾಂಜನೇಯ ಗೆಳೆಯರ ಬಳಗದ ವತಿಯಿಂದ ಆಯೋಜನೆ ಮಾಡಲಾಗಿತ್ತು. ಶ್ರೀ ರಾಮಾಂಜನೇಯ ಭಜನಾ ಮಂದಿರದ 4ನೇ ವರ್ಷದ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಸಂಕಲ್ಪದಡಿ ಬುಧವಾರ ನಡೆದ ರುದ್ರಯಾಗದ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಯಾಗದ ಪೂರ್ಣಾಹುತಿ ಕಾರ್ಯ ನಿಗದಿಯಾಗಿತ್ತು. ಆದರೆ ಕೊನೆಕ್ಷಣದಲ್ಲಿ ಬಿಎಸ್ವೈ ಗೈರಾಗಿದ್ದರಿಂದ ಸಂಸದ ನಳಿನ್ ಕುಮಾರ್ ಯಾಗದ ಪೂರ್ಣಾಹುತಿ ನೆರವೇರಿಸಿದ್ದಾರೆ. ದೇಶಕ್ಕಾಗಿ ತನ್ನ ಜೀವನವನ್ನು ಮುಡಿಪಾಗಿರಿಸಿದ ನರೇಂದ್ರ ಮೋದಿ ಅವರು ಮುಂದಕ್ಕೂ ಪ್ರಧಾನಿಯಾಗುವಂತೆ ಕೈ ಜೋಡಿಸಬೇಕು ಎಂದರು.

ಬಲಿಷ್ಠ ಭಾರತ ನಿರ್ಮಿಸಲು ಶ್ರೀರಾಮಾಂಜನೇಯ ದೇವರ, ಶ್ರೀ ಕಾರಿಂಜೇಶ್ವರ ದೇವರ ಮತ್ತು ಮೈರ ಶ್ರೀ ಮಹಾಕಾಳಿ ಅಮ್ಮನವರ ಅನುಗ್ರಹ ಪ್ರಧಾನಿಗೆ ಇರಲೆಂಬ ಆಶಯದಲ್ಲಿ ಎಲ್ಲರೂ ಒಟ್ಟಾಗಿ ಈ ಯಾಗ ನೆರವೇರಿಸಲಾಗಿದೆ ಎಂದು ಗೆಳೆಯರ ಬಳಗದ ಮಾಜಿ ಅಧ್ಯಕ್ಷ ರಂಜಿತ್ ಮೈರ ತಿಳಿಸಿದ್ದಾರೆ.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಸೇರಿದಂತೆ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

vishwanews24

 

 

 

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

15 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

15 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

15 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

15 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

16 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

16 hours ago