Featured

ಬಂಟ್ವಾಳ: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ – ಪ್ರೀತಿಸಲು ಒತ್ತಾಯಿಸಿದ್ದ ಅನ್ಯಕೋಮಿನ ಯುವಕನ ವಿರುದ್ದ ಪ್ರಕರಣ – Vishwanews24

ಬಂಟ್ವಾಳ: ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್ – ಪ್ರೀತಿಸಲು ಒತ್ತಾಯಿಸಿದ್ದ ಅನ್ಯಕೋಮಿನ ಯುವಕನ ವಿರುದ್ದ ಪ್ರಕರಣ

ಬಂಟ್ವಾಳ: ಕನ್ಯಾನದ ಗ್ರಾಮದ ಕಣಿಯೂರು ಹತ್ತನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ತಿರುವು ದೊರಕಿದ್ದು , ಅನ್ಯಕೋಮಿನ ಯುವಕ ಪ್ರೀತಿಸುವಂತೆ ಒತ್ತಾಯಿಸಿದ್ದರಿಂದ ಮನನೊಂದು ಬಾಲಕಿ ಕೃತ್ಯ ಎಸಗಿದ್ದು, ಹೀಗಾಗಿ ಯುವಕನ ಯುವಕನೋರ್ವನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಸುಳ್ಯ ತಾಲೂಕಿನ ಪಂಜ ನಿವಾಸಿ ಸಂಜೀವ ಎಂಬವರ ಪುತ್ರಿ ಆತ್ಮೀಕಾ (14) ಎಂಬಾಕೆ ಕಣಿಯೂರು ಎಂಬಲ್ಲಿರುವ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು . ಕನ್ಯಾನ ಗ್ರಾಮದ ಹಮೀದ್(30) ಆತ್ಮಹತ್ಯೆಗೆ ಕಾರಣ ಎಂದು ಅವನ ಮೇಲೆ ಸಂಜೀವ ಅವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಕನ್ಯಾನ ಗ್ರಾಮದ ಕಣಿಯೂರಿನಲ್ಲಿ ಮಸೀದಿ ಹಿಂಬಾಗದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಸಂಜೀವ ಅವರ ಕುಟುಂಬ ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದರು. ಎಂದಿನಂತೆ ದಂಪತಿಗಳು ಕೂಲಿ ಕೆಲಸಕ್ಕೆ ತೆರಳಿದ್ದು, ಪುತ್ರ ಔಷಧಿ ತರಲೆಂದು ತೆರಳಿದ್ದು ಪುತ್ರಿ ಮಾತ್ರ ಮನೆಯಲ್ಲಿದ್ದಳು. ತಾಯಿ ಬೇಗ ಕೆಲಸ ಮುಗಿಸಿ 11.15 ರ ವೇಳೆಗೆ ಮನೆಗೆ ಮರಳಿದಾಗ ಮಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ಆತ್ಮೀಕಾ ಕಣಿಯೂರು ತಲೆಕ್ಕಿ ನಿವಾಸಿಯಾದ ಸಾಹುಲ್ ಹಮೀದ್ ಯಾನೆ ಕುಟ್ಟ ದೀರ್ಘ ಕಾಲ ಮೊಬೈಲ್ ನಲ್ಲಿ ಮಾತನಾಡುತ್ತಿದ್ದು ಇದನ್ನು ತಿಳಿದು ತಂದೆ ಮಗಳ ಮೊಬೈಲ್ ನ್ನು ತೆಗೆದಿರಿಸಿ ಆಕೆಗೆ ಬುದ್ಧಿವಾದ ಹೇಳಿದ್ದರು. ಸಾಹುಲ್ ಹಮೀದ್ ಹಾಗೂ ಆತನ ಅಣ್ಣನನ್ನು ಈ ವಿಚಾರಕ್ಕೆ ಸಂಬಂಧಪಟ್ಟಂತೆ ಕರೆದು ಆತನಿಗೆ ಮಗಳ ಸಹವಾಸಕ್ಕೆ ಬರಬೇಡ ಎಂದು ಎಚ್ಚರಿಕೆ ನೀಡಿದ್ದರು. ಆದರೂ ಕೂಡ ಸಾಹುಲ್ ಹಮೀದ್ ಪದೇ ಪದೇ ಯಾರೂ ಇಲ್ಲದ ಸಮಯ ಆಕೆಯ ಮನೆಗೆ ಬಂದು ಆಕೆಯನ್ನು ಭೇಟಿಯಾಗಿ ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಅಲ್ಲದೇ ನೀನು ನಿನ್ನ ತಂದೆ – ತಾಯಿಯನ್ನು ಬಿಟ್ಟು ನನ್ನೊಂದಿಗೆ ಬಾ. ನೀನು ಬರುವುದಿಲ್ಲವಾದರೆ ಸಾಯಿ ಎಂದು ಸಾಹುಲ್ ಹಮೀದ ಯಾನೆ ಕುಟ್ಟ ಹೇಳಿರುವುದನ್ನು ಮಗಳು ಆತ್ಮಿಕ ತಂದೆ ಹಾಗೂ ತಾಯಿ ಬಳಿ ಹೇಳಿಕೊಂಡಿದ್ದಳು ಎಂದು ದೂರಿನಲ್ಲಿ ತಿಳಿಸಲಾಗಿದೆ. ಪರಿಶಿಷ್ಟ ಜಾತಿಗೆ ಸೇರಿದವರೆಂದು ತಿಳಿದಿದ್ದರೂ, ಬಾಲಕಿಯ ಮನಸ್ಸು ಕೆಡಿಸಿ ಪ್ರೀತಿಸುವಂತೆ ಒತ್ತಾಯ ಮಾಡಿದ್ದರಿಂದ ಮನನೊಂದು ಈ ಕೃತ್ಯ ಎಸೆಗಿದ್ದಾಳೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Vishwa News 24

Recent Posts

ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು :vishwanews24

ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು ಕಾಪು: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ವಿಶೇಷವಾಗಿ ಕಾಪು ಪೇಟೆ ಹಾಗೂ…

13 minutes ago

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ -vishwanews24

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…

22 hours ago

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ-2026ಕ್ಕೆ  ಚಾಲನೆ -vishwanews24

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…

22 hours ago

ಬರ್ತ್‌ಡೇ, ಪ್ರಿವೆಡ್ಡಿಂಗ್‌ ಫೋಟೋಶೂಟ್‌ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್‌ ಡೆಕ್ಕರ್‌ ಅಂಬಾರಿ ಬಸ್‌! -vishwanews24

ಬರ್ತ್‌ಡೇ, ಪ್ರಿವೆಡ್ಡಿಂಗ್‌ ಫೋಟೋಶೂಟ್‌ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್‌ ಡೆಕ್ಕರ್‌ ಅಂಬಾರಿ ಬಸ್‌! ಬೆಂಗಳೂರು : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ…

22 hours ago

ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು -vishwanews24

ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು ಮಲ್ಪೆ: ಸಮುದ್ರ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರ…

1 day ago

ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು -vishwanews24

ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು ಪ್ರವಾಸಿಗರು ಎಚ್ಚರಿಕೆಯಿಂದ ಸಂಚರಿಸುವಂತೆ…

1 day ago