ಬಂಟ್ವಾಳ : ಸಜೀಪನಡು ಗ್ರಾಮದ ದೇರಾಜೆಯ ದೀಕ್ಷಿತ್ ಅವರ ಮನೆಗೆ ವಿದ್ಯುತ್ ದುರಸ್ತಿಯವನ ಸೋಗಿನಲ್ಲಿ ನುಗ್ಗಿದ ಕಳ್ಳನೋರ್ವ 42 ಸಾವಿರ ರೂ. ಮೌಲ್ಯದ 7 ಗ್ರಾಂ ಚಿನ್ನಾಭರಣ ಹಾಗೂ 6 ಸಾವಿರ ರೂ. ನಗದನ್ನು ಕಳವು ಮಾಡಿದ ಘಟನೆ ನಡೆದಿದೆ.
ಮನೆಯಲ್ಲಿ ಸರೋಜಿನಿ ಎನ್ನುವ ಮಹಿಳೆಯನ್ನು ನಿಲ್ಲಿಸಿ ಮನೆಮಂದಿ ಪಾಣೆಮಂಗಳೂರಿನಲ್ಲಿ ನಡೆಯುತ್ತಿದ್ದ ಮದುವೆಗೆ ತೆರಳಿದ್ದರು. ಮಧ್ಯಾಹ್ನ 2-3 ರ ಮಧ್ಯೆ ಅಪರಿಚಿತ ವ್ಯಕ್ತಿಯೋರ್ವ ಆಗಮಿಸಿ ದೀಚು (ದೀಕ್ಷಿತ್) ಅವರು ಮನೆಯ ವಿದ್ಯುತ್ ವಯರ್ ಹಾಗೂ ಲೈಟ್ ದುರಸ್ತಿ ಮಾಡಲು ತಿಳಿಸಿದ್ದಾರೆಂದು ಹೇಳಿದನು. ಸತ್ಯವೆಂದು ನಂಬಿದ ಸರೋಜಿನಿ ಆತನನ್ನು ಒಳಗೆ ಬಿಟ್ಟಿದ್ದರು.
ಆತ ದುರಸ್ತಿಯ ನಾಟಕ ಮಾಡಿ ಮಲಗುವ ಕೋಣೆಯ ಮಂಚದ ಕೆಳಭಾಗದಲ್ಲಿ ಬ್ಯಾಗ್ನಲ್ಲಿದ್ದ ಚಿನ್ನ ಹಾಗೂ ನಗದನ್ನು ಕಳವು ಮಾಡಿದ್ದಾನೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…