ಬಂಟ್ವಾಳ: ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ನವವಿವಾಹಿತೆ – Vishwanews24

Featured, ದಕ್ಷಿಣ ಕನ್ನಡ

ಬಂಟ್ವಾಳ: ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ನವವಿವಾಹಿತೆ

ಬಂಟ್ವಾಳ: ಎರಡು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ಯುವತಿಯೋರ್ವರು ತವರು ಮನೆಯಲ್ಲಿ ವಿಷ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಗುಡ್ಡಕೋಡಿ ಬಾಳಪ್ಪ ಎಂಬವರ ಪುತ್ರಿ ಹರ್ಷಿತಾ (28) ಮೃತಪಟ್ಟವರು.

ಕೆಮ್ಮಿಂಜೆ ದೇಗುಲದ ಮ್ಯಾನೇಜರ್ ಪ್ರಶಾಂತ್ ಜತೆಗೆ ಹರ್ಷಿತಾ ಅವರ ವಿವಾಹ ಫೆಬ್ರವರಿ 10 ನಡೆದಿತ್ತು. ಮದುವೆಯ ನಂತರ ಹರ್ಷಿತಾ ತನ್ನ ಗಂಡನ ಮನೆಯಲ್ಲಿ ವಾಸಿಸುತ್ತಿದ್ದು, ಏಪ್ರಿಲ್ 23ರಂದು ತನ್ನ ಪೋಷಕರ ಮನೆಗೆ ಹೋಗಿದ್ದರು. ಅಲ್ಲಿ 24 ರಂದು ರಾತ್ರಿ 11 ಗಂಟೆಗೆ ತಾನು ಕೀಟನಾಶಕ ಸೇವಿಸಿರುವುದಾಗಿ ತಾಯಿಗೆ ತಿಳಿಸಿದ್ದರು. ತಕ್ಷಣ ಆಕೆಯನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ

ಮಂಗಳೂರಿನ ಪ್ರಖ್ಯಾತ ಪಬ್ಬಾಸ್ ನಲ್ಲಿ ಐಸ್ ಕ್ರೀಮ್ ಸವಿದ ರಾಹುಲ್ ಗಾಂಧಿ – Vishwanews24

ಆಕೆ ಮಾನಸಿಕ ಖಿನ್ನತೆಯಿಂದ ಈ ಕೃತ್ಯ ಎಸಗಿರುವುದಾಗಿ ತಾಯಿ ನೀಡಿದ ದೂರಿನಂತೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave a Reply