Featured

ಬಂಟ್ವಾಳ : ಶಬರಿಮಲೆ ಯಾತ್ರೆ ಮುಗಿಸಿ ವಾಪಸ್ ಆಗುವ ವೇಳೆ ಅಪಘಾತ, ಬಾಲಕ ಸಾವು – vishwanews24

ಬಂಟ್ವಾಳ : ಶಬರಿಮಲೆ ಯಾತ್ರೆ ಮುಗಿಸಿ ವಾಪಸ್ ಆಗುವ ವೇಳೆ ಅಪಘಾತ, ನಿಂತಿದ್ದ ಕಾರಿಗೆ ಹಿಂದಿನಿಂದ ಡಿಕ್ಕಿಯಾದ ಲಾರಿ – ವೃತದಾರಿ ಬಾಲಕ ಸಾವು

ಬಂಟ್ವಾಳ: ಶಬರಿಮಲೆ ಯಾತ್ರೆ ಕೈಗೊಂಡು ದೇವರ ದರ್ಶನ ಮುಗಿಸಿ ವಾಪಸ್ ಮನೆಗೆ ಬರುವ ವೇಳೆ ಲಾರಿ ಡಿಕ್ಕಿಯಾಗಿ ಬಂಟ್ವಾಳದ ವೃತದಾರಿ ಬಾಲಕನೋರ್ವ ಮೃತಪಟ್ಟ ಘಟನೆ ಕೇರಳ ರಾಜ್ಯದ ಕ್ಯಾಲಿಕಟ್ ಸಮೀಪದ ಕೋಟೆಕಲ್ ಎಂಬಲ್ಲಿ ಜ.9ರ ಶುಕ್ರವಾರ ತಡರಾತ್ರಿ ವೇಳೆ ನಡೆದಿದೆ.

ಕುರಿಯಾಳ ಗ್ರಾಮದ ದುರ್ಗಾನಗರ ಸಮೀಪದ ಕೊಪ್ಪಳ ನಿವಾಸಿ ಅಶೋಕ್ ಪೂಜಾರಿ ಅವರ ಪುತ್ರ ಲಕ್ಷ್ಮೀಶ ಪೂಜಾರಿ (15) ಲಾರಿ ಅಪಘಾತದಲ್ಲಿ ಮೃತಪಟ್ಟ ಬಾಲಕ.

ಇನ್ನು ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದುರ್ಗಾನಗರ ನಿವಾಸಿಗಳಾದ ಅಶೋಕ್ ಪೂಜಾರಿ, ಸಂತೋಷ್ ಪೂಜಾರಿ, ಸಚಿನ್, ಗೋಪಾಲ ಪೂಜಾರಿ, ಲಕ್ಷ್ಮೀಶ ಪೂಜಾರಿ, ಕಿರಣ್, ವರದ್ ರಾಜ್ ಇನ್ನೋವಾ ಕಾರಿನಲ್ಲಿ ಒಟ್ಟು 7 ಮಂದಿ ಕುರಿಯಾಳದಿಂದ ಅಯ್ಯಪ್ಪ ಮಾಲಾಧಾರಿಗಳು ಶಬರಿಮಲೆಗೆ ತೆರಳಿದ್ದರು.

ಸಿದ್ದಕಟ್ಟೆಯ ಶಾಲೆಯ 9 ನೇ ತರಗತಿಯ ಬಾಲಕ ಲಕ್ಷ್ಮೀಶ, ಆತನ ತಂದೆ ಅಶೋಕ್ ಪೂಜಾರಿ ಜೊತೆ ಶಬರಿಮಲೆಗೆ ಜ.7 ರಂದು ಇನ್ನೋವಾ ಕಾರಿನಲ್ಲಿ ತೆರಳಿದ್ದರು. ಒಟ್ಟು 9 ಮಂದಿ ಕಾರಿನಲ್ಲಿ ತೆರಳಿದ್ದು, ದೇವರ ದರ್ಶನ ಮುಗಿಸಿ ಜ.9 ರಂದು ವಾಪಸ್ ಬರುತ್ತಿದ್ದ ವೇಳೆ ಕೊಟೆಕಲ್ ಎಂಬಲ್ಲಿ ಇವರ ಕಾರು ಕೆಟ್ಟುಹೋಗಿತ್ತು.

ಈ ಕಾರಣಕ್ಕಾಗಿ ಅಶೋಕ್ ಪೂಜಾರಿ ಒಬ್ಬರು ಕಾರಿನೊಳಗೆ ಕುಳಿತುಕೊಂಡಿದ್ದು, ಉಳಿದಂತೆ ಚಾಲಕ ಸೇರಿ 7 ಮಂದಿ ಕೂಡ ಕಾರಿನ ಎದುರು ಬೊನೆಟ್ ಓಪನ್ ಮಾಡಿ ಕಾರು ರಿಪೇರಿಯಲ್ಲಿ ತೊಡಗಿದ್ದರು. ಸುಮಾರು 2 ಗಂಟೆ ವೇಳೆಗೆ ಯಮ ಸ್ವರೂಪಿ ಲಾರಿಯೊಂದು ರಸ್ತೆ ಬದಿಯಲ್ಲಿ ನಿಲ್ಲಿಸಿ ರಿಪೇರಿ ಮಾಡುತ್ತಿದ್ದ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಎಲ್ಲರೂ ರಸ್ತೆಗೆ ಎಸೆಯಲ್ಪಟ್ಟಿದ್ದು ಅದೇ ಯಮ ಸ್ವರೂಪಿ ಲಾರಿಯ ಅಡಿಗೆ ಬಾಲಕ ಲಕ್ಷ್ಮೀಶ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಉಳಿದಂತೆ ವರದರಾಜ್ ಎಂಬವರು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರೆ, ಕಾರಿನ ಎದುರಿದ್ದ ಎಲ್ಲರು ಸಣ್ಣಪುಟ್ಟ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

10 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

10 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

11 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

11 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

11 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

11 hours ago