Featured

ಬಂಟ್ವಾಳ : ಶಬರಿಮಲೆ ಯಾತ್ರೆ ಮುಗಿಸಿ ವಾಪಸ್ ಆಗುವ ವೇಳೆ ಅಪಘಾತ, ಬಾಲಕ ಸಾವು – vishwanews24

ಬಂಟ್ವಾಳ : ಶಬರಿಮಲೆ ಯಾತ್ರೆ ಮುಗಿಸಿ ವಾಪಸ್ ಆಗುವ ವೇಳೆ ಅಪಘಾತ, ನಿಂತಿದ್ದ ಕಾರಿಗೆ ಹಿಂದಿನಿಂದ ಡಿಕ್ಕಿಯಾದ ಲಾರಿ – ವೃತದಾರಿ ಬಾಲಕ ಸಾವು

ಬಂಟ್ವಾಳ: ಶಬರಿಮಲೆ ಯಾತ್ರೆ ಕೈಗೊಂಡು ದೇವರ ದರ್ಶನ ಮುಗಿಸಿ ವಾಪಸ್ ಮನೆಗೆ ಬರುವ ವೇಳೆ ಲಾರಿ ಡಿಕ್ಕಿಯಾಗಿ ಬಂಟ್ವಾಳದ ವೃತದಾರಿ ಬಾಲಕನೋರ್ವ ಮೃತಪಟ್ಟ ಘಟನೆ ಕೇರಳ ರಾಜ್ಯದ ಕ್ಯಾಲಿಕಟ್ ಸಮೀಪದ ಕೋಟೆಕಲ್ ಎಂಬಲ್ಲಿ ಜ.9ರ ಶುಕ್ರವಾರ ತಡರಾತ್ರಿ ವೇಳೆ ನಡೆದಿದೆ.

ಕುರಿಯಾಳ ಗ್ರಾಮದ ದುರ್ಗಾನಗರ ಸಮೀಪದ ಕೊಪ್ಪಳ ನಿವಾಸಿ ಅಶೋಕ್ ಪೂಜಾರಿ ಅವರ ಪುತ್ರ ಲಕ್ಷ್ಮೀಶ ಪೂಜಾರಿ (15) ಲಾರಿ ಅಪಘಾತದಲ್ಲಿ ಮೃತಪಟ್ಟ ಬಾಲಕ.

ಇನ್ನು ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದುರ್ಗಾನಗರ ನಿವಾಸಿಗಳಾದ ಅಶೋಕ್ ಪೂಜಾರಿ, ಸಂತೋಷ್ ಪೂಜಾರಿ, ಸಚಿನ್, ಗೋಪಾಲ ಪೂಜಾರಿ, ಲಕ್ಷ್ಮೀಶ ಪೂಜಾರಿ, ಕಿರಣ್, ವರದ್ ರಾಜ್ ಇನ್ನೋವಾ ಕಾರಿನಲ್ಲಿ ಒಟ್ಟು 7 ಮಂದಿ ಕುರಿಯಾಳದಿಂದ ಅಯ್ಯಪ್ಪ ಮಾಲಾಧಾರಿಗಳು ಶಬರಿಮಲೆಗೆ ತೆರಳಿದ್ದರು.

ಸಿದ್ದಕಟ್ಟೆಯ ಶಾಲೆಯ 9 ನೇ ತರಗತಿಯ ಬಾಲಕ ಲಕ್ಷ್ಮೀಶ, ಆತನ ತಂದೆ ಅಶೋಕ್ ಪೂಜಾರಿ ಜೊತೆ ಶಬರಿಮಲೆಗೆ ಜ.7 ರಂದು ಇನ್ನೋವಾ ಕಾರಿನಲ್ಲಿ ತೆರಳಿದ್ದರು. ಒಟ್ಟು 9 ಮಂದಿ ಕಾರಿನಲ್ಲಿ ತೆರಳಿದ್ದು, ದೇವರ ದರ್ಶನ ಮುಗಿಸಿ ಜ.9 ರಂದು ವಾಪಸ್ ಬರುತ್ತಿದ್ದ ವೇಳೆ ಕೊಟೆಕಲ್ ಎಂಬಲ್ಲಿ ಇವರ ಕಾರು ಕೆಟ್ಟುಹೋಗಿತ್ತು.

ಈ ಕಾರಣಕ್ಕಾಗಿ ಅಶೋಕ್ ಪೂಜಾರಿ ಒಬ್ಬರು ಕಾರಿನೊಳಗೆ ಕುಳಿತುಕೊಂಡಿದ್ದು, ಉಳಿದಂತೆ ಚಾಲಕ ಸೇರಿ 7 ಮಂದಿ ಕೂಡ ಕಾರಿನ ಎದುರು ಬೊನೆಟ್ ಓಪನ್ ಮಾಡಿ ಕಾರು ರಿಪೇರಿಯಲ್ಲಿ ತೊಡಗಿದ್ದರು. ಸುಮಾರು 2 ಗಂಟೆ ವೇಳೆಗೆ ಯಮ ಸ್ವರೂಪಿ ಲಾರಿಯೊಂದು ರಸ್ತೆ ಬದಿಯಲ್ಲಿ ನಿಲ್ಲಿಸಿ ರಿಪೇರಿ ಮಾಡುತ್ತಿದ್ದ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಎಲ್ಲರೂ ರಸ್ತೆಗೆ ಎಸೆಯಲ್ಪಟ್ಟಿದ್ದು ಅದೇ ಯಮ ಸ್ವರೂಪಿ ಲಾರಿಯ ಅಡಿಗೆ ಬಾಲಕ ಲಕ್ಷ್ಮೀಶ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಉಳಿದಂತೆ ವರದರಾಜ್ ಎಂಬವರು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರೆ, ಕಾರಿನ ಎದುರಿದ್ದ ಎಲ್ಲರು ಸಣ್ಣಪುಟ್ಟ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

8 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

8 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

8 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

9 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

9 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

9 hours ago