ಬಂಟ್ವಾಳ: ಹಿಂಸೆಯ ಮುಖಾಂತರವೇ ವ್ಯವಸ್ಥೆಯನ್ನು ಬುಡಮೇಲು ಗೊಳಿಸುವ ಪಿ.ಎಫ್.ಐ ಸಂಘಟನೆಯನ್ನು ಹತ್ತಿಕ್ಕಲು ಬಿಜೆಪಿ ಸರಕಾರ ಬದ್ದವಾಗಿದ್ದು, ಈ ಕುರಿತು ಕಾರ್ಯಚರಣೆ ನಡೆಸುತ್ತಿರುವ ಪೊಲೀಸ್ ಕಾರ್ಯ ಶ್ಲಾಘನೀಯ, ಅವರ ಕಾರ್ಯಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಸಚಿವ ಸುನಿಲ್ ಕುಮಾರ್ ಹೇಳಿದರು.
ಅವರು ಬಿಸಿರೋಡಿನಲ್ಲಿ ಮಾಧ್ಯಮ ದವರ ಜೊತೆ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಇದನ್ನೂ ಓದಿ : ಆಂತರಿಕ ಶತ್ರುಗಳ ಕಿರಿಕಿರಿ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಸಮಾಜ ಘಾತುಕ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ನಂಬಿಕೆ ಇಲ್ಲದಿರುವವರ ವಿರುದ್ಧ ಕೇಂದ್ರ ಹಾಗೂ ರಾಜ್ಯ ಸರ್ಕಾರ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳುತ್ತಿದೆ. ಕಾಂಗ್ರೇಸ್ ಅಧಿಕಾರವಧಿಯಲ್ಲಿ ನಡೆದಿದ್ದ ಹಿಂದೂ ಕಾರ್ಯಕರ್ತರ ಹತ್ಯೆಯಲ್ಲಿ ಹಾಗೂ ಇತ್ತೀಚೆಗೆ ಶಿವಮೊಗ್ಗ ಹಾಗೂ ಪುತ್ತೂರುನಲ್ಲಿ ನಡೆದಿದ್ದ ಕೊಲೆ ಕೃತ್ಯದಲ್ಲಿ ಪಿಎಫ್ ಐ ಸಂಘಟನೆಯ ಕೈವಾಡ ಇರುವುದು ತನಿಖೆಯಲ್ಲಿ ತಿಳಿದು ಬಂದಿದೆ, ಹೀಗಾಗಿ ಅವರ ವಿರುದ್ಧ ಎನ್ ಐಎ ಹಾಗೂ ಪೊಲೀಸರು ಕ್ರಮಕೈಗೊಂಡಿದ್ದಾರೆ.
ಸಮಾಜ ದ್ರೋಹಿಗಳಿಗೆ ವಿಜೃಂಭಿಸಲು ಬಿಜೆಪಿ ಸರ್ಕಾರ ಅವಕಾಶ ನೀಡುವುದಿಲ್ಲ, ಸಿದ್ಧರಾಮಯ್ಯ ವಿಜೃಂಭಿಸಲು ಅವಕಾಶ ಕೊಟ್ಟಿದ್ದರು. ಶಂಕಿತ ಉಗ್ರನಿಂದ ಬಂಟ್ವಾಳದಲ್ಲಿ ಬಾಂಬ್ ರಿಹರ್ಸಲ್ ನಡೆದಿರುವ ವಿಚಾರದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅಂತರ್ರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಿರುವ ಇಂತಹಾ ಕೃತ್ಯಗಳನ್ನು ಎಎನ್ಐ ಹಾಗೂ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದರು. ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ, ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಆರ್.ಸಿ.ನಾರಾಯಣ್ ಉಪಸ್ಥಿತರಿದ್ದರು.
ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…
ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…