ಬಂಟ್ವಾಳ: ಹಿಂಸೆಯ ಮುಖಾಂತರವೇ ವ್ಯವಸ್ಥೆಯನ್ನು ಬುಡಮೇಲು ಗೊಳಿಸುವ ಪಿ.ಎಫ್.ಐ ಸಂಘಟನೆಯನ್ನು ಹತ್ತಿಕ್ಕಲು ಬಿಜೆಪಿ ಸರಕಾರ ಬದ್ದವಾಗಿದ್ದು, ಈ ಕುರಿತು ಕಾರ್ಯಚರಣೆ ನಡೆಸುತ್ತಿರುವ ಪೊಲೀಸ್ ಕಾರ್ಯ ಶ್ಲಾಘನೀಯ, ಅವರ ಕಾರ್ಯಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಸಚಿವ ಸುನಿಲ್ ಕುಮಾರ್ ಹೇಳಿದರು.
ಅವರು ಬಿಸಿರೋಡಿನಲ್ಲಿ ಮಾಧ್ಯಮ ದವರ ಜೊತೆ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಇದನ್ನೂ ಓದಿ : ಆಂತರಿಕ ಶತ್ರುಗಳ ಕಿರಿಕಿರಿ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಸಮಾಜ ಘಾತುಕ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ನಂಬಿಕೆ ಇಲ್ಲದಿರುವವರ ವಿರುದ್ಧ ಕೇಂದ್ರ ಹಾಗೂ ರಾಜ್ಯ ಸರ್ಕಾರ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳುತ್ತಿದೆ. ಕಾಂಗ್ರೇಸ್ ಅಧಿಕಾರವಧಿಯಲ್ಲಿ ನಡೆದಿದ್ದ ಹಿಂದೂ ಕಾರ್ಯಕರ್ತರ ಹತ್ಯೆಯಲ್ಲಿ ಹಾಗೂ ಇತ್ತೀಚೆಗೆ ಶಿವಮೊಗ್ಗ ಹಾಗೂ ಪುತ್ತೂರುನಲ್ಲಿ ನಡೆದಿದ್ದ ಕೊಲೆ ಕೃತ್ಯದಲ್ಲಿ ಪಿಎಫ್ ಐ ಸಂಘಟನೆಯ ಕೈವಾಡ ಇರುವುದು ತನಿಖೆಯಲ್ಲಿ ತಿಳಿದು ಬಂದಿದೆ, ಹೀಗಾಗಿ ಅವರ ವಿರುದ್ಧ ಎನ್ ಐಎ ಹಾಗೂ ಪೊಲೀಸರು ಕ್ರಮಕೈಗೊಂಡಿದ್ದಾರೆ.
ಸಮಾಜ ದ್ರೋಹಿಗಳಿಗೆ ವಿಜೃಂಭಿಸಲು ಬಿಜೆಪಿ ಸರ್ಕಾರ ಅವಕಾಶ ನೀಡುವುದಿಲ್ಲ, ಸಿದ್ಧರಾಮಯ್ಯ ವಿಜೃಂಭಿಸಲು ಅವಕಾಶ ಕೊಟ್ಟಿದ್ದರು. ಶಂಕಿತ ಉಗ್ರನಿಂದ ಬಂಟ್ವಾಳದಲ್ಲಿ ಬಾಂಬ್ ರಿಹರ್ಸಲ್ ನಡೆದಿರುವ ವಿಚಾರದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅಂತರ್ರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಿರುವ ಇಂತಹಾ ಕೃತ್ಯಗಳನ್ನು ಎಎನ್ಐ ಹಾಗೂ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದರು. ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ, ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಆರ್.ಸಿ.ನಾರಾಯಣ್ ಉಪಸ್ಥಿತರಿದ್ದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…