ಬಂಟ್ವಾಳ: ಸಾರ್ವಜನಿಕ ಹಿತದೃಷ್ಟಿಯಿಂದ ಸಸಿಕಾಂತ್ ಸೆಂಥಿಲ್ ರನ್ನುಬಂಧಿಸಿ : ತಾಪಂ ಸದಸ್ಯ ಪ್ರಭಾಕರ ಪ್ರಭು -Vishwanews24

ಬಂಟ್ವಾಳ: ಬಂಟ್ವಾಳ: ಸಾರ್ವಜನಿಕ ಹಿತದೃಷ್ಟಿಯಿಂದ ಸಸಿಕಾಂತ್ ಸೆಂಥಿಲ್ ರನ್ನುಬಂಧಿಸಿ, ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿ ಎಂದು ಬಂಟ್ವಾಳ ತಾಪಂ ಸದಸ್ಯ ಪ್ರಭಾಕರ ಪ್ರಭು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಲೋಕಸಭೆ ಮತ್ತು ರಾಜ್ಯಸಭೆಗಳೆರಡರಲ್ಲು ಭಾರತ ಸರಕಾರವು ಮಂಡಿಸಿದ ಪೌರತ್ವ ತಿದ್ದುಪಡಿ ಕಾಯ್ದೆ ಬಿಲ್ ಅನುಮೋದನೆಯಾಗಿದ್ದು, ನಿವೃತ್ತ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಈ ಕಾಯಿದೆಯ ವಿರುದ್ದ ಸಾರ್ವಜನಿಕ ವಲಯದಲ್ಲಿ ಗೊಂದಲ ಸೃಷ್ಟಿಸುವ ಹೇಳಿಕೆ ನೀಡಿ ಸಮಾಜವನ್ನು ಛಿದ್ರಗೊಳಿಸುವ ಹುನ್ನಾರ ನಡೆಸುತ್ತಿರುವ ಹಿನ್ನಲೆಯಲ್ಲಿ ಅವರ ಮೇಲೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲು ಸೂಚನೆ ನೀಡುವಂತೆ ಬಂಟ್ವಾಳ ತಾಪಂ ಸದಸ್ಯ ಪ್ರಭಾಕರ ಪ್ರಭು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಸಿ.ಎ.ಎ. ವಿರುದ್ದ ಪ್ರತಿಭಟನೆ ಸಂಬಂಧಿಸಿದ ಸಾರ್ವಜನಿಕ ಸಭೆಗಳಲ್ಲಿ ದಲಿತರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳ ಮುಗ್ಧ ಜನರನ್ನು ದಿಕ್ಕು ತಪ್ಪಿಸುವ, ಕಲಹಕ್ಕೆ ಪ್ರಚೋದನೆ ನೀಡುವಂತಹ ಭಾಷಣದ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಠಿಸಲು ದಕ್ಷಿಣ ಕನ್ನಡ ಜಿಲ್ಲೆಯ ನಿವೃತ್ತ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಯತ್ನಿಸುತ್ತಿದ್ದಾರೆ. ತಾನೊಬ್ಬ ಸ್ವಯಂ ನಿವೃತ್ತ ಐ.ಎ.ಎಸ್. ಅಧಿಕಾರಿ, ತಾನೇ ಇಡೀ ರಾಷ್ಟ್ರದ ಅತೀ ಬುದ್ದಿವಂತರಲ್ಲಿ ಓರ್ವ ಶ್ರೇಷ್ಟ ವ್ಯಕ್ತಿ ಎಂಬಂತೆ ವರ್ತಿಸುತ್ತಿರುವುದು ಸಾರ್ವಜನಿಕ ವಲಯದಲ್ಲಿ ಆತಂಕದ ಪರಿಸ್ಥಿತಿ ಹುಟ್ಟುಹಾಕಿದೆ ಎಂದು ಪ್ರಭು ಮನವಿಯಲ್ಲಿ ಆರೋಪಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯಿದೆ ವಿರುದ್ದ ಮಂಗಳೂರಿನಲ್ಲಿ ಈಚೆಗೆ ನಡೆಸಿದ ಪ್ರತಿಭಟನಾಕಾರರ ರಂಪಾಟ ಗಂಭೀರ ಸ್ವರೂಪ ಪಡೆದುಕೊಂಡಾಗ ಪೊಲೀಸರು ನಡೆಸಿದ ಅಶ್ರುವಾಯು, ಗೋಲಿಬಾರ್ ಕ್ರಮ ತಪ್ಪು ಹಾಗೂ ಪ್ರತಿಭಟನಾಕಾರರನ್ನು ಕಂಟ್ರೋಲ್ ಮಾಡದ ಪೋಲೀಸ್ ಏಕೆ ಬೇಕು? ಎಂದು ಅವರು ಪ್ರಶ್ನಿಸಿರುವುದು ಇಡೀ ಪೋಲೀಸ್ ಇಲಾಖೆಯನ್ನು ನಿಂದಿಸುವಂತಾಗಿದ್ದು ತಾನೊಬ್ಬ ಹಿಂದಿನ ಜಿಲ್ಲಾಧಿಕಾರಿ ಎಂಬುದನ್ನು ಮರೆತಂತಾಗಿದೆ ಎಂದು ಪ್ರಭು ದೂರಿದ್ದಾರೆ.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಂಗಳೂರಿನಿಂದ ಟಿಕೆಟ್ ಗಿಟ್ಟಿಸಿಕೊಳ್ಳಲು ರಾಜಕೀಯ ಪಕ್ಷದ ಏಜೆಂಟರಂತೆ ವರ್ತಿಸಿ, ಸಿಎಎ ವಿರುದ್ದ ಪ್ರತಿಭಟನೆ ಸಂದರ್ಭ ನಡೆದ ಗೋಲಿಬಾರ್ ಗೆ ಕರ್ನಾಟಕ ರಾಜ್ಯ ಸರಕಾರ ನೇರ ಹೊಣೆ. ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ವಿರುದ್ದ ಸೆಂಥಿಲ್ ಟೀಕೆ ಮಾಡುತ್ತಿರುವುದು ರಾಷ್ಟ್ರ ದ್ರೋಹ ಎಂದೆನಿಸಿದೆ ಎಂದು ಮನವಿಯಲ್ಲಿ ಅಪಾದಿಸಿದ್ದಾರೆ.

ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ನಿವೃತ್ತ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್‌ರವರನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಬಂಧಿಸಿ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಬೇಕು ಮತ್ತು ಇವರ ಪೂರ್ವ ಪರ ಸಮಗ್ರವಾದ ಆಂತರಿಕ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪ್ರಭು ಪತ್ರದಲ್ಲಿ ಕೋರಿದ್ದಾರೆ. ಮನವಿಯ ಪ್ರತಿಯನ್ನು ಕರ್ನಾಟಕ ಸರಕಾರದ ಗೃಹಸಚಿವರು, ಪೊಲೀಸ್ ಮಹಾ ನಿರ್ದೇಶಕರು ಕರ್ನಾಟಕ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದ.ಕ.ಮತ್ತು ಬಂಟ್ವಾಳ ವೃತ ನಿರೀಕ್ಷಕರಿಗೂ ರವಾನಿಸಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago