ಬಂಟ್ವಾಳ: ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿನ ಸುಮಂಗಲ ಕೋ. ಆಪರೇಟಿವ್ ಸೊಸೈಟಿಯಲ್ಲಿ ನಕಲಿ ದಾಖಲಾತಿಗಳನ್ನು ನೀಡಿ ಸಾಲ ಪಡೆದು, ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಬಶೀರ್ ಯಾನೆ ಹಸನ್ ಬಶೀರ್ (42) ಬಂಧಿತ ಆರೋಪಿ.
ಈತ ಕರ್ವಾನ್ ಅಟೋಮೊಬೈಲ್ಸ್ನ ವಿವಿಧ ಕಂಪೆನಿಯ ಕಾರು ಮಾರಾಟಗಾರರು ಎಂಬ ಹೆಸರಿನಲ್ಲಿ ನಕಲಿ ಸಂಸ್ಥೆ ಮಾಡಿಕೊಂಡಿದ್ದು, ಇದೇ ಹೆಸರಿನಲ್ಲಿ ನಕಲಿ ದಾಖಲಾತಿ ನೀಡಿ ಫರಂಗಿಪೇಟೆಯ ಸುಮಂಗಲ ಕೋ. ಆಪರೇಟಿವ್ ಸೊಸೈಟಿಯಲ್ಲಿ ಸುಮಾರು 7 ಲಕ್ಷ ಸಾಲ ಪಡೆದು ವಂಚಿಸಿದ್ದ.
ಮಾತ್ರವಲ್ಲದೇ ಕರ್ವಾನ್ ಅಟೋಮೊಬೈಲ್ಸ್ ಎಂದು ಅಸ್ತಿತ್ವದಲ್ಲಿರುವ ಕಾರು ಮಾರಾಟ ಸಂಸ್ಥೆಯ ಹೆಸರಿನಲ್ಲಿ ಮಂಗಳೂರು, ಬಂಟ್ವಾಳ, ವಿಟ್ಲ, ಮೂಡಬಿದ್ರೆ ವಿವಿಧ ಬ್ಯಾಂಕ್ ಗಳಿಗೆ ಬೇರೆಯವರ ಹೆಸರಿನಲ್ಲಿ ಕೊಟೇಶನ್ ನೀಡಿ ಸುಮಾರು 2 ಕೋಟಿ ರೂಪಾಯಿ ಅಧಿಕ ಹಣ ಪಡೆದ ವಂಚನೆ ಎಸಗಿರುವ ಮಾಹಿತಿ ತಿಳಿದು ಬಂದಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…