ಬಂಟ್ವಾಳ: ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿನ ಸುಮಂಗಲ ಕೋ. ಆಪರೇಟಿವ್ ಸೊಸೈಟಿಯಲ್ಲಿ ನಕಲಿ ದಾಖಲಾತಿಗಳನ್ನು ನೀಡಿ ಸಾಲ ಪಡೆದು, ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಬಶೀರ್ ಯಾನೆ ಹಸನ್ ಬಶೀರ್ (42) ಬಂಧಿತ ಆರೋಪಿ.
ಈತ ಕರ್ವಾನ್ ಅಟೋಮೊಬೈಲ್ಸ್ನ ವಿವಿಧ ಕಂಪೆನಿಯ ಕಾರು ಮಾರಾಟಗಾರರು ಎಂಬ ಹೆಸರಿನಲ್ಲಿ ನಕಲಿ ಸಂಸ್ಥೆ ಮಾಡಿಕೊಂಡಿದ್ದು, ಇದೇ ಹೆಸರಿನಲ್ಲಿ ನಕಲಿ ದಾಖಲಾತಿ ನೀಡಿ ಫರಂಗಿಪೇಟೆಯ ಸುಮಂಗಲ ಕೋ. ಆಪರೇಟಿವ್ ಸೊಸೈಟಿಯಲ್ಲಿ ಸುಮಾರು 7 ಲಕ್ಷ ಸಾಲ ಪಡೆದು ವಂಚಿಸಿದ್ದ.
ಮಾತ್ರವಲ್ಲದೇ ಕರ್ವಾನ್ ಅಟೋಮೊಬೈಲ್ಸ್ ಎಂದು ಅಸ್ತಿತ್ವದಲ್ಲಿರುವ ಕಾರು ಮಾರಾಟ ಸಂಸ್ಥೆಯ ಹೆಸರಿನಲ್ಲಿ ಮಂಗಳೂರು, ಬಂಟ್ವಾಳ, ವಿಟ್ಲ, ಮೂಡಬಿದ್ರೆ ವಿವಿಧ ಬ್ಯಾಂಕ್ ಗಳಿಗೆ ಬೇರೆಯವರ ಹೆಸರಿನಲ್ಲಿ ಕೊಟೇಶನ್ ನೀಡಿ ಸುಮಾರು 2 ಕೋಟಿ ರೂಪಾಯಿ ಅಧಿಕ ಹಣ ಪಡೆದ ವಂಚನೆ ಎಸಗಿರುವ ಮಾಹಿತಿ ತಿಳಿದು ಬಂದಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಆರಂಭ - ಈ ನಿಯಮ ಪಾಲನೆ ಕಡ್ಡಾಯ ಅಧಿಕೃತ ವೆಬ್ಸೈಟ್ ಮೂಲಕ ಪೂರ್ವ ನೋಂದಣಿ ಮಾಡಿಸಿಕೊಳ್ಳುವುದು…
ಉಡುಪಿ: ಡಿವೈಡರ್ ಮೇಲೇರಿದ ಸ್ಕೂಲ್ ಬಸ್ ; ತಪ್ಪಿದ ಅನಾಹುತ ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್ಗೆ ಸೇರಿದ ಬಸ್ವೊಂದು ಗುರುವಾರ…
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…