ಬಂಟ್ವಾಳ : ಸ್ಕೂಟರ್ ಗೆ ಖಾಸಗಿ ಬಸ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಪಲ್ಲಮಜಲು ಕ್ರಾಸ್ ಎಂಬಲ್ಲಿ ನಡೆದಿದೆ.
ಬುಧವಾರ ಸಂಜೆ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಪಲ್ಲಮಜಲು ಕ್ರಾಸ್ ಎಂಬಲ್ಲಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಸ್ಕೂಟರ್ ಸವಾರ ನಾರಾಯಣ ಎಂಬುವವರು ಸ್ಕೂಟರ್ ಸಮೇತ ರಸ್ತೆಗೆ ಎಸೆಯಲ್ಪಟು ಗಂಭೀರ ಗಾಯಗೊಂಡಿದ್ದರು.
ಕೂಡಲೇ ಅವರನ್ನು ಚಿಕಿತ್ಸೆಗಾಗಿ ಸ್ಥಳಿಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿನ ವೈದ್ಯರು ಗಾಯಾಳುವನ್ನು ಪರೀಕ್ಷಿಸಿದಾಗ ವ್ಯಕ್ತಿ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.
ಇನ್ನೂ ಈ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 167/2023 ಕಲಂ : 279, 304(A) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಎಸ್ಎಸ್ಎಲ್ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್ಎಸ್ಎಲ್ಸಿ…
ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…