ಬಂಟ್ವಾಳ : ಮುಂಬರುವ ರಾಜ್ಯದ ಹಾನಗಲ್ ಮತ್ತು ಸಿಂಧಗಿ ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಮಂಗಳೂರು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಭವಿಷ್ಯ ನುಡಿದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ 71ನೇ ಜನ್ಮದಿನಾಚರಣೆಯ ಅಂಗವಾಗಿ ಮಂಗಳೂರು ವಿಧಾನ ಸಭಾ ಕ್ಷೇತ್ರದ ಪುದು ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಮೇರಮಜಲು ಗ್ರಾಮದ ಪಕ್ಕಳಪಾದೆ ಸರಸ್ವತಿ ಮಂದಿರದ ಬಳಿ ನಡೆದ ಸೇವೆ ಮತ್ತು ಸಮರ್ಪಣಾ ಕಾರ್ಯಕ್ರಮ ಹಾಗೂ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಬಿಜೆಪಿಗೆ ಕಾರ್ಯಕರ್ತರೇ ಶಕ್ತಿ ಮತಗಟ್ಟೆಯ ಅಧ್ಯಕ್ಷನಿಂದ ಬಿಜೆಪಿ ಪಕ್ಷ ಬೆಳೆದಿದ್ದು, ಆತನೇ ಬೂತ್ಗೆ ಸುಪ್ರಿಂ ಎಂದ ಅವರು ಮುಂದಿನ 20 ವರ್ಷ ಕಾಂಗ್ರೆಸ್ ಪಕ್ಷ ನಿರುದ್ಯೋಗಿಗಳ ಪಕ್ಷವಾಗಲಿದೆ. ಅಧ್ಯಕ್ಷರನ್ನೇ ಆಯ್ಕೆ ಮಾಡಲು ಸಾಧ್ಯವಾಗದ ಕಾಂಗ್ರೆಸ್ ಪಕ್ಷ ಹಲವು ಮಂದಿ ರಾಜ್ಯದಲ್ಲಿ ಮುಖ್ಯಮಂತ್ರಿಯ ಕನಸು ಕಾಣುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ಭವಿಷ್ಯದಲ್ಲಿ ಯಾವುದೇ ಗುಡಿ, ಗೋಪುರಗಳನ್ನು ಕೆಡವದಂತೆ ವಿಶೇಷ ವಿಧೇಯಕವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ತಂದಿದ್ದಾರೆ. ಹಿಂದುತ್ವ ವಿಚಾರಧಾರೆಯಲ್ಲಿ ಯಾವುದೇ ರಾಜಿಯಿಲ್ಲ. ದೇವಸ್ಥಾನದ ವಿಚಾರ ಮುಂದಿಟ್ಟುಕೊಂಡು ಕಾಂಗ್ರೆಸ್ಸಿಗರು ರಾಜಕಾರಣಕ್ಕಾಗಿ, ಹಿಂದುಗಳ ಮತ ಪಡೆಯಲು ಪ್ರಯತ್ನಿಸುತ್ತಿದೆ ಎಂದು ಟೀಕಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ಮಾತನಾಡಿ, ಮಂಗಳೂರು ಮಂಡಲದಲ್ಲಿ ಯಶಸ್ವಿಯಾಗಿ ಸಂಘಟನಾ ಕಾರ್ಯ ನಡೆಯುತ್ತಿದ್ದು ಇದೇ ರೀತಿ ಮುಂದುವರಿದ್ದಲ್ಲಿ ಮುಂಬರುವ ಎಲ್ಲಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದರು.
ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ ಜಿಲ್ಲೆಯ ಚಿಂಚಿನಾಡ…
ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…
ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…
ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…
ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…