Featured

ಬಂಟ್ವಾಳ: ಹಿರಿಯ ತುಳು ರಂಗಭೂಮಿ ಕಲಾವಿದ, ನಟ ರಮೇಶ್ ಕಲ್ಲಡ್ಕ ಹೃದಯಾಘಾತದಿಂದ ನಿಧನ – vishwanews24

ಬಂಟ್ವಾಳ: ಹಿರಿಯ ತುಳು ರಂಗಭೂಮಿ ಕಲಾವಿದ, ಚಲನಚಿತ್ರ ನಟ ರಮೇಶ್ ಕಲ್ಲಡ್ಕ ಹೃದಯಾಘಾತದಿಂದ ನಿಧನ

ಬಂಟ್ವಾಳ: ತುಳು ರಂಗಭೂಮಿ ಹಿರಿಯ ಕಲಾವಿದ, ಚಲನಚಿತ್ರ ನಟ ಚಿ.ರಮೇಶ್ ಕಲ್ಲಡ್ಕ (68) ಹೃದಯಾಘಾತದಿಂದ ಬುಧವಾರ ಬೆಳಗ್ಗೆ ಕಲ್ಲಡ್ಕದ ಕೊಳಕೀರು ಮನೆಯಲ್ಲಿ ನಿಧನ ಹೊಂದಿದ್ದಾರೆ. ಅವರು ಒಬ್ಬ ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.

ರಂಗಭೂಮಿಯಲ್ಲಿ 30 ವರ್ಷಗಳಿಗೂ ಹೆಚ್ಚು ಕಾಲ ಕಲಾಸೇವೆಗೈದಿರುವ ರಮೇಶ್ ಕಲ್ಲಡ್ಕ ಕಳೆದ 20 ವರ್ಷಗಳಿಂದ ವಿಜಯಕುಮಾರ್ ಕೊಡಿಯಾಲ್ ಬೈಲ್ ರ ಕಲಾಸಂಗಮದಲ್ಲಿ ಕಲಾವಿದರಾಗಿ ಕಲಾಸೇವೆ ಮಾಡುತ್ತಿದ್ದರು. ವಿಜಯಕುಮಾರ್ ಕೊಡಿಯಾಲ್ ಬೈಲ್ ಅವರಿಂದ ತರಬೇತಿ ಪಡೆದ ರಮೇಶ್ ಕಲ್ಲಡ್ಕ ಕಲಾಸಂಗಮದ ಎಲ್ಲಾ ಸಾಮಾಜಿಕ, ಪೌರಾಣಿಕ ನಾಟಕಗಳಲ್ಲಿ ಅಭಿನಯಿಸಿದ್ದಾರೆ.

‘ಶಿವದೂತಗುಳಿಗೆ’ ನಾಟಕದ ಭೀಮಾರಾವ್ ಪಾತ್ರ ಅವರಿಗೆ ವ್ಯಾಪಕ ಮನ್ನಣೆ ತಂದುಕೊಟ್ಟಿದೆ. ಶಿವಾಜಿ ನಾಟಕದಲ್ಲೂ ಅವರು ನಿರ್ವಹಿಸಿದ ದಾದ ಕೊಂಡೆಯ ಪಾತ್ರದ ಅಭಿನಯವು ವ್ಯಾಪಕ ಗಮನ ಸೆಳೆದಿತ್ತು.

ರಂಗಭೂಮಿಯಲ್ಲಿ ಶಿಸ್ತಿನ ಕಲಾವಿದರಾಗಿದ್ದ ರಮೇಶ್ ಕಲ್ಲಡ್ಕ ಅವರು, ಸರಳ ಸೌಮ್ಯಸ್ವಭಾವವರು. ಕಲಾಸಂಗಮದ ಮೂಲಕ ಮುಂಬೈ, ಬೆಂಗಳೂರು ಸಹಿತ ಬೇರೆ ಬೇರೆ ಊರುಗಳಲ್ಲಿ ನಾಟಕ ಪ್ರದರ್ಶನ ನೀಡಿದ್ದರು.

ಮೃತರ ಅಂತ್ಯ ಸಂಸ್ಕಾರ ಇಂದು ಬೆಳಿಗ್ಗೆ 11 ಗಂಟೆಗೆ ಕಲ್ಲಡ್ಕದಲ್ಲಿರುವ ರುದ್ರಭೂಮಿಯಲ್ಲಿ ನೆರವೇರಲಿದೆ.

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

7 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

8 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

8 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

8 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

9 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

10 hours ago