Featured

ಬಂಟ್ವಾಳ : 4 ವರ್ಷದ ಫೇಸ್‌ಬುಕ್‌ ಪ್ರೀತಿ ; ಯವಕನೆಂದು ನಂಬಿಸಿ ಯವತಿಗೆ ವಂಚಿಸಿದ ಮಂಗಳಮುಖಿ – Vishwanews24

ಬಂಟ್ವಾಳ : 4 ವರ್ಷದ ಫೇಸ್‌ಬುಕ್‌ ಪ್ರೀತಿ ; ಯವಕನೆಂದು ನಂಬಿಸಿ ಯವತಿಗೆ ವಂಚಿಸಿದ ಮಂಗಳಮುಖಿ

ಬಂಟ್ವಾಳ: ಫೇಸ್​ಬುಕ್​ನಲ್ಲಿ ಪರಿಚಿತವಾದ ವ್ಯಕ್ತಿಯೊಬ್ಬರ ಜತೆ ಸ್ನೇಹ ಬೆಳೆಸಿಕೊಂಡ ಯುವತಿ, ಆ ವ್ಯಕ್ತಿ ಜತೆ ಪ್ರೀತಿಯ ಬಲೆಗೂ ಬಿದ್ದಿದ್ದಳು. ಸತತ ನಾಲ್ಕು ವರ್ಷದಿಂದ ಫೋನ್​ನಲ್ಲೇ ಮಾತನಾಡುತ್ತಾ, ಪರಸ್ಪರ ಭಾವನೆಗಳನ್ನು ಹಂಚಿಕೊಂಡಿದ್ದರು.

ಯುವತಿಗೆ ಮದುವೆ ಆಗುವುದಾಗಿ ಆ ವ್ಯಕ್ತಿ ನೂರಾರು ಆಸೆ-ಕನಸು ಹುಟ್ಟಿಸಿದ್ದ. ಆಕೆಯೂ ಪ್ರಿಯಕರನ ಜತೆ ಬಾಳಲು ಹಾತೊರೆಯುತ್ತಿದ್ದಳು. ತನ್ನ ಪ್ರೀತಿ ಬಗ್ಗೆ ಯುವತಿ ಮನೆಯಲ್ಲಿ ಹೇಳಿಕೊಂಡಿದ್ದಳು. ಫೇಸ್​ಬುಕ್​ ಲವ್​ ಎಲ್ಲ ನಮಗೆ ಸರಿ ಬರಲ್ಲ, ಬೇಡ ಎಂದಿದ್ದಕ್ಕೆ ಯುವತಿ ಮನೆಯವರ ವಿರುದ್ಧವೇ ತಿರುಗಿಬಿದ್ದಿದ್ದಳು. ಅಂತಿಮವಾಗಿ ಈ ಪ್ರಕರಣ ಪೊಲೀಸ್​ ಠಾಣೆ ಮೆಟ್ಟಿಲೇರಿದಾಗ ಯುವತಿಗೆ ಆಘಾತಕಾರಿ ವಿಷಯ ಗೊತ್ತಾಗಿದೆ. ಇನ್ನು ಯುವತಿಯ ಕುಟುಂಬಸ್ಥರೂ ಬೆಚ್ಚಿಬಿದ್ದಿದ್ದಾಳೆ.

ಏನಿದು ಪ್ರಕರಣ: ಬಂಟ್ವಾಳ ತಾಲೂಕಿನ ವಿಟ್ಲ ಪಡ್ನೂರು ಗ್ರಾಮದ ಯುವತಿಗೆ ನಾಲ್ಕು ವರ್ಷದ ಹಿಂದೆ ಫೇಸ್‌ಬುಕ್‌ನಲ್ಲಿ ಪ್ರದೀಪ್ ಎಂಬಾತನ ಪರಿಚಯವಾಗಿತ್ತು. ಸಿವಿಲ್ ಇಂಜಿನಿಯರ್ ಎಂದು ಆತ ಪರಿಚಯಿಸಿಕೊಂಡಿದ್ದ. ಆತನ ಮುಖ ನೋಡದೆ ಇದ್ದರೂ, ಆತನ ಪ್ರೀತಿಯ ಮಾತಿಗೆ ಮರುಳಾಗಿ ಪ್ರೇಮಪಾಶಕ್ಕೆ ಸಿಲುಕಿದ್ದಳು. ದಿನಾ ಕರೆ ಮಾಡಿ ಮದುವೆಯಾಗುವುದಾಗಿ ನಂಬಿಸುತ್ತಿದ್ದ. ಈ ವಿಚಾರವಾಗಿ ಯುವತಿ ಮನೆಮಂದಿಯೊಂದಿಗೆ ಜಗಳವಾಡುತ್ತಿದ್ದಳು. ಈ ಬಗ್ಗೆ ಯುವತಿಯ ತಾಯಿ, ವಕೀಲೆ ಶೈಲಜಾ ರಾಜೇಶ್ ಅವರಲ್ಲಿ ವಿಷಯ ತಿಳಿಸಿದ್ದರು. ಅವರು ಕೌನ್ಸೆಲಿಂಗ್ ಮಾಡಿದಾಗ ಯುವತಿ ಸಂಪೂರ್ಣವಾಗಿ ಪ್ರದೀಪ್‌ನ ಮೋಹಕ್ಕೆ ಒಳಗಾಗಿದ್ದಳು. ಮನವರಿಕೆ ಮಾಡಿದರೂ ಮಾತು ಕೇಳದಿದ್ದಾಗ ಶೈಲಜಾ ರಾಜೇಶ್ ಸೂಚನೆಯಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಾಗಿತ್ತು.

ವಿಟ್ಲ ಹಾಗೂ ಉಡುಪಿ ಜಿಲ್ಲೆ ಶಂಕರನಾರಾಯಣ ಠಾಣೆ ಪೊಲೀಸರ ಸಹಕಾರದೊಂದಿಗೆ ಸ್ವತಃ ಶೈಲಜಾ ರಾಜೇಶ್ ಅವರು ಯುವತಿಗೆ ಕರೆ ಮಾಡುತ್ತಿದ್ದಾತನ ಸಿದ್ದಾಪುರದ ಸ್ಥಳವನ್ನು ಪತ್ತೆ ಮಾಡಿ ಮನೆಗೆ ಭೇಟಿ ನೀಡಿದಾಗ ಅಚ್ಚರಿಯ ಅಂಶ ಬೆಳಕಿಗೆ ಬಂದಿದೆ. ಯುವತಿಯೊಂದಿಗೆ ಪ್ರದೀಪ್ ಎಂಬಾತನ ಹೆಸರಿನಲ್ಲಿ ಗಂಡಸಿನ ಧ್ವನಿಯಲ್ಲಿ ಮಾತನಾಡುತ್ತಿದ್ದದ್ದು ಜ್ಯೋತಿ ಎಂಬ ಹೆಸರಿನ ಮಂಗಳಮುಖಿ! ನಾಲ್ಕು ವರ್ಷದಿಂದ ಮನೆಮಂದಿಗೂ ತಲೆನೋವಾಗಿದ್ದ ಯುವತಿಯ ಪ್ರೇಮ ಪ್ರಕರಣ ಅಂತ್ಯ ಕಂಡಿದೆ.

ಮಿಸ್ ಇಂಡಿಯಾ ಸಿನಿ ಶೆಟ್ಟಿ ಅವರಿಂದ ಕಾಪುವಿನ ಖಾಸಗಿ ಐಸ್ ಕ್ರೀಮ್ ಪಾರ್ಲರ್ ನಲ್ಲಿ ಗಡ್ಬಡ್ ಐಸ್ ಕ್ರೀಂ ತಯಾರಿಸುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್.

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

6 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

6 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

6 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

21 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

21 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

22 hours ago