Featured

ಬಂಟ್ವಾಳ : 4 ವರ್ಷದ ಫೇಸ್‌ಬುಕ್‌ ಪ್ರೀತಿ ; ಯವಕನೆಂದು ನಂಬಿಸಿ ಯವತಿಗೆ ವಂಚಿಸಿದ ಮಂಗಳಮುಖಿ – Vishwanews24

ಬಂಟ್ವಾಳ : 4 ವರ್ಷದ ಫೇಸ್‌ಬುಕ್‌ ಪ್ರೀತಿ ; ಯವಕನೆಂದು ನಂಬಿಸಿ ಯವತಿಗೆ ವಂಚಿಸಿದ ಮಂಗಳಮುಖಿ

ಬಂಟ್ವಾಳ: ಫೇಸ್​ಬುಕ್​ನಲ್ಲಿ ಪರಿಚಿತವಾದ ವ್ಯಕ್ತಿಯೊಬ್ಬರ ಜತೆ ಸ್ನೇಹ ಬೆಳೆಸಿಕೊಂಡ ಯುವತಿ, ಆ ವ್ಯಕ್ತಿ ಜತೆ ಪ್ರೀತಿಯ ಬಲೆಗೂ ಬಿದ್ದಿದ್ದಳು. ಸತತ ನಾಲ್ಕು ವರ್ಷದಿಂದ ಫೋನ್​ನಲ್ಲೇ ಮಾತನಾಡುತ್ತಾ, ಪರಸ್ಪರ ಭಾವನೆಗಳನ್ನು ಹಂಚಿಕೊಂಡಿದ್ದರು.

ಯುವತಿಗೆ ಮದುವೆ ಆಗುವುದಾಗಿ ಆ ವ್ಯಕ್ತಿ ನೂರಾರು ಆಸೆ-ಕನಸು ಹುಟ್ಟಿಸಿದ್ದ. ಆಕೆಯೂ ಪ್ರಿಯಕರನ ಜತೆ ಬಾಳಲು ಹಾತೊರೆಯುತ್ತಿದ್ದಳು. ತನ್ನ ಪ್ರೀತಿ ಬಗ್ಗೆ ಯುವತಿ ಮನೆಯಲ್ಲಿ ಹೇಳಿಕೊಂಡಿದ್ದಳು. ಫೇಸ್​ಬುಕ್​ ಲವ್​ ಎಲ್ಲ ನಮಗೆ ಸರಿ ಬರಲ್ಲ, ಬೇಡ ಎಂದಿದ್ದಕ್ಕೆ ಯುವತಿ ಮನೆಯವರ ವಿರುದ್ಧವೇ ತಿರುಗಿಬಿದ್ದಿದ್ದಳು. ಅಂತಿಮವಾಗಿ ಈ ಪ್ರಕರಣ ಪೊಲೀಸ್​ ಠಾಣೆ ಮೆಟ್ಟಿಲೇರಿದಾಗ ಯುವತಿಗೆ ಆಘಾತಕಾರಿ ವಿಷಯ ಗೊತ್ತಾಗಿದೆ. ಇನ್ನು ಯುವತಿಯ ಕುಟುಂಬಸ್ಥರೂ ಬೆಚ್ಚಿಬಿದ್ದಿದ್ದಾಳೆ.

ಏನಿದು ಪ್ರಕರಣ: ಬಂಟ್ವಾಳ ತಾಲೂಕಿನ ವಿಟ್ಲ ಪಡ್ನೂರು ಗ್ರಾಮದ ಯುವತಿಗೆ ನಾಲ್ಕು ವರ್ಷದ ಹಿಂದೆ ಫೇಸ್‌ಬುಕ್‌ನಲ್ಲಿ ಪ್ರದೀಪ್ ಎಂಬಾತನ ಪರಿಚಯವಾಗಿತ್ತು. ಸಿವಿಲ್ ಇಂಜಿನಿಯರ್ ಎಂದು ಆತ ಪರಿಚಯಿಸಿಕೊಂಡಿದ್ದ. ಆತನ ಮುಖ ನೋಡದೆ ಇದ್ದರೂ, ಆತನ ಪ್ರೀತಿಯ ಮಾತಿಗೆ ಮರುಳಾಗಿ ಪ್ರೇಮಪಾಶಕ್ಕೆ ಸಿಲುಕಿದ್ದಳು. ದಿನಾ ಕರೆ ಮಾಡಿ ಮದುವೆಯಾಗುವುದಾಗಿ ನಂಬಿಸುತ್ತಿದ್ದ. ಈ ವಿಚಾರವಾಗಿ ಯುವತಿ ಮನೆಮಂದಿಯೊಂದಿಗೆ ಜಗಳವಾಡುತ್ತಿದ್ದಳು. ಈ ಬಗ್ಗೆ ಯುವತಿಯ ತಾಯಿ, ವಕೀಲೆ ಶೈಲಜಾ ರಾಜೇಶ್ ಅವರಲ್ಲಿ ವಿಷಯ ತಿಳಿಸಿದ್ದರು. ಅವರು ಕೌನ್ಸೆಲಿಂಗ್ ಮಾಡಿದಾಗ ಯುವತಿ ಸಂಪೂರ್ಣವಾಗಿ ಪ್ರದೀಪ್‌ನ ಮೋಹಕ್ಕೆ ಒಳಗಾಗಿದ್ದಳು. ಮನವರಿಕೆ ಮಾಡಿದರೂ ಮಾತು ಕೇಳದಿದ್ದಾಗ ಶೈಲಜಾ ರಾಜೇಶ್ ಸೂಚನೆಯಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಾಗಿತ್ತು.

ವಿಟ್ಲ ಹಾಗೂ ಉಡುಪಿ ಜಿಲ್ಲೆ ಶಂಕರನಾರಾಯಣ ಠಾಣೆ ಪೊಲೀಸರ ಸಹಕಾರದೊಂದಿಗೆ ಸ್ವತಃ ಶೈಲಜಾ ರಾಜೇಶ್ ಅವರು ಯುವತಿಗೆ ಕರೆ ಮಾಡುತ್ತಿದ್ದಾತನ ಸಿದ್ದಾಪುರದ ಸ್ಥಳವನ್ನು ಪತ್ತೆ ಮಾಡಿ ಮನೆಗೆ ಭೇಟಿ ನೀಡಿದಾಗ ಅಚ್ಚರಿಯ ಅಂಶ ಬೆಳಕಿಗೆ ಬಂದಿದೆ. ಯುವತಿಯೊಂದಿಗೆ ಪ್ರದೀಪ್ ಎಂಬಾತನ ಹೆಸರಿನಲ್ಲಿ ಗಂಡಸಿನ ಧ್ವನಿಯಲ್ಲಿ ಮಾತನಾಡುತ್ತಿದ್ದದ್ದು ಜ್ಯೋತಿ ಎಂಬ ಹೆಸರಿನ ಮಂಗಳಮುಖಿ! ನಾಲ್ಕು ವರ್ಷದಿಂದ ಮನೆಮಂದಿಗೂ ತಲೆನೋವಾಗಿದ್ದ ಯುವತಿಯ ಪ್ರೇಮ ಪ್ರಕರಣ ಅಂತ್ಯ ಕಂಡಿದೆ.

ಮಿಸ್ ಇಂಡಿಯಾ ಸಿನಿ ಶೆಟ್ಟಿ ಅವರಿಂದ ಕಾಪುವಿನ ಖಾಸಗಿ ಐಸ್ ಕ್ರೀಮ್ ಪಾರ್ಲರ್ ನಲ್ಲಿ ಗಡ್ಬಡ್ ಐಸ್ ಕ್ರೀಂ ತಯಾರಿಸುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

7 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

13 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

13 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

14 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

15 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

15 hours ago