Featured

ಬಂಟ್ವಾಳ : 4 ವರ್ಷದ ಫೇಸ್‌ಬುಕ್‌ ಪ್ರೀತಿ ; ಯವಕನೆಂದು ನಂಬಿಸಿ ಯವತಿಗೆ ವಂಚಿಸಿದ ಮಂಗಳಮುಖಿ – Vishwanews24

ಬಂಟ್ವಾಳ : 4 ವರ್ಷದ ಫೇಸ್‌ಬುಕ್‌ ಪ್ರೀತಿ ; ಯವಕನೆಂದು ನಂಬಿಸಿ ಯವತಿಗೆ ವಂಚಿಸಿದ ಮಂಗಳಮುಖಿ

ಬಂಟ್ವಾಳ: ಫೇಸ್​ಬುಕ್​ನಲ್ಲಿ ಪರಿಚಿತವಾದ ವ್ಯಕ್ತಿಯೊಬ್ಬರ ಜತೆ ಸ್ನೇಹ ಬೆಳೆಸಿಕೊಂಡ ಯುವತಿ, ಆ ವ್ಯಕ್ತಿ ಜತೆ ಪ್ರೀತಿಯ ಬಲೆಗೂ ಬಿದ್ದಿದ್ದಳು. ಸತತ ನಾಲ್ಕು ವರ್ಷದಿಂದ ಫೋನ್​ನಲ್ಲೇ ಮಾತನಾಡುತ್ತಾ, ಪರಸ್ಪರ ಭಾವನೆಗಳನ್ನು ಹಂಚಿಕೊಂಡಿದ್ದರು.

ಯುವತಿಗೆ ಮದುವೆ ಆಗುವುದಾಗಿ ಆ ವ್ಯಕ್ತಿ ನೂರಾರು ಆಸೆ-ಕನಸು ಹುಟ್ಟಿಸಿದ್ದ. ಆಕೆಯೂ ಪ್ರಿಯಕರನ ಜತೆ ಬಾಳಲು ಹಾತೊರೆಯುತ್ತಿದ್ದಳು. ತನ್ನ ಪ್ರೀತಿ ಬಗ್ಗೆ ಯುವತಿ ಮನೆಯಲ್ಲಿ ಹೇಳಿಕೊಂಡಿದ್ದಳು. ಫೇಸ್​ಬುಕ್​ ಲವ್​ ಎಲ್ಲ ನಮಗೆ ಸರಿ ಬರಲ್ಲ, ಬೇಡ ಎಂದಿದ್ದಕ್ಕೆ ಯುವತಿ ಮನೆಯವರ ವಿರುದ್ಧವೇ ತಿರುಗಿಬಿದ್ದಿದ್ದಳು. ಅಂತಿಮವಾಗಿ ಈ ಪ್ರಕರಣ ಪೊಲೀಸ್​ ಠಾಣೆ ಮೆಟ್ಟಿಲೇರಿದಾಗ ಯುವತಿಗೆ ಆಘಾತಕಾರಿ ವಿಷಯ ಗೊತ್ತಾಗಿದೆ. ಇನ್ನು ಯುವತಿಯ ಕುಟುಂಬಸ್ಥರೂ ಬೆಚ್ಚಿಬಿದ್ದಿದ್ದಾಳೆ.

ಏನಿದು ಪ್ರಕರಣ: ಬಂಟ್ವಾಳ ತಾಲೂಕಿನ ವಿಟ್ಲ ಪಡ್ನೂರು ಗ್ರಾಮದ ಯುವತಿಗೆ ನಾಲ್ಕು ವರ್ಷದ ಹಿಂದೆ ಫೇಸ್‌ಬುಕ್‌ನಲ್ಲಿ ಪ್ರದೀಪ್ ಎಂಬಾತನ ಪರಿಚಯವಾಗಿತ್ತು. ಸಿವಿಲ್ ಇಂಜಿನಿಯರ್ ಎಂದು ಆತ ಪರಿಚಯಿಸಿಕೊಂಡಿದ್ದ. ಆತನ ಮುಖ ನೋಡದೆ ಇದ್ದರೂ, ಆತನ ಪ್ರೀತಿಯ ಮಾತಿಗೆ ಮರುಳಾಗಿ ಪ್ರೇಮಪಾಶಕ್ಕೆ ಸಿಲುಕಿದ್ದಳು. ದಿನಾ ಕರೆ ಮಾಡಿ ಮದುವೆಯಾಗುವುದಾಗಿ ನಂಬಿಸುತ್ತಿದ್ದ. ಈ ವಿಚಾರವಾಗಿ ಯುವತಿ ಮನೆಮಂದಿಯೊಂದಿಗೆ ಜಗಳವಾಡುತ್ತಿದ್ದಳು. ಈ ಬಗ್ಗೆ ಯುವತಿಯ ತಾಯಿ, ವಕೀಲೆ ಶೈಲಜಾ ರಾಜೇಶ್ ಅವರಲ್ಲಿ ವಿಷಯ ತಿಳಿಸಿದ್ದರು. ಅವರು ಕೌನ್ಸೆಲಿಂಗ್ ಮಾಡಿದಾಗ ಯುವತಿ ಸಂಪೂರ್ಣವಾಗಿ ಪ್ರದೀಪ್‌ನ ಮೋಹಕ್ಕೆ ಒಳಗಾಗಿದ್ದಳು. ಮನವರಿಕೆ ಮಾಡಿದರೂ ಮಾತು ಕೇಳದಿದ್ದಾಗ ಶೈಲಜಾ ರಾಜೇಶ್ ಸೂಚನೆಯಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಾಗಿತ್ತು.

ವಿಟ್ಲ ಹಾಗೂ ಉಡುಪಿ ಜಿಲ್ಲೆ ಶಂಕರನಾರಾಯಣ ಠಾಣೆ ಪೊಲೀಸರ ಸಹಕಾರದೊಂದಿಗೆ ಸ್ವತಃ ಶೈಲಜಾ ರಾಜೇಶ್ ಅವರು ಯುವತಿಗೆ ಕರೆ ಮಾಡುತ್ತಿದ್ದಾತನ ಸಿದ್ದಾಪುರದ ಸ್ಥಳವನ್ನು ಪತ್ತೆ ಮಾಡಿ ಮನೆಗೆ ಭೇಟಿ ನೀಡಿದಾಗ ಅಚ್ಚರಿಯ ಅಂಶ ಬೆಳಕಿಗೆ ಬಂದಿದೆ. ಯುವತಿಯೊಂದಿಗೆ ಪ್ರದೀಪ್ ಎಂಬಾತನ ಹೆಸರಿನಲ್ಲಿ ಗಂಡಸಿನ ಧ್ವನಿಯಲ್ಲಿ ಮಾತನಾಡುತ್ತಿದ್ದದ್ದು ಜ್ಯೋತಿ ಎಂಬ ಹೆಸರಿನ ಮಂಗಳಮುಖಿ! ನಾಲ್ಕು ವರ್ಷದಿಂದ ಮನೆಮಂದಿಗೂ ತಲೆನೋವಾಗಿದ್ದ ಯುವತಿಯ ಪ್ರೇಮ ಪ್ರಕರಣ ಅಂತ್ಯ ಕಂಡಿದೆ.

ಮಿಸ್ ಇಂಡಿಯಾ ಸಿನಿ ಶೆಟ್ಟಿ ಅವರಿಂದ ಕಾಪುವಿನ ಖಾಸಗಿ ಐಸ್ ಕ್ರೀಮ್ ಪಾರ್ಲರ್ ನಲ್ಲಿ ಗಡ್ಬಡ್ ಐಸ್ ಕ್ರೀಂ ತಯಾರಿಸುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago