ಬಂಟ್ವಾಳ: ಫೇಸ್ಬುಕ್ನಲ್ಲಿ ಪರಿಚಿತವಾದ ವ್ಯಕ್ತಿಯೊಬ್ಬರ ಜತೆ ಸ್ನೇಹ ಬೆಳೆಸಿಕೊಂಡ ಯುವತಿ, ಆ ವ್ಯಕ್ತಿ ಜತೆ ಪ್ರೀತಿಯ ಬಲೆಗೂ ಬಿದ್ದಿದ್ದಳು. ಸತತ ನಾಲ್ಕು ವರ್ಷದಿಂದ ಫೋನ್ನಲ್ಲೇ ಮಾತನಾಡುತ್ತಾ, ಪರಸ್ಪರ ಭಾವನೆಗಳನ್ನು ಹಂಚಿಕೊಂಡಿದ್ದರು.
ಯುವತಿಗೆ ಮದುವೆ ಆಗುವುದಾಗಿ ಆ ವ್ಯಕ್ತಿ ನೂರಾರು ಆಸೆ-ಕನಸು ಹುಟ್ಟಿಸಿದ್ದ. ಆಕೆಯೂ ಪ್ರಿಯಕರನ ಜತೆ ಬಾಳಲು ಹಾತೊರೆಯುತ್ತಿದ್ದಳು. ತನ್ನ ಪ್ರೀತಿ ಬಗ್ಗೆ ಯುವತಿ ಮನೆಯಲ್ಲಿ ಹೇಳಿಕೊಂಡಿದ್ದಳು. ಫೇಸ್ಬುಕ್ ಲವ್ ಎಲ್ಲ ನಮಗೆ ಸರಿ ಬರಲ್ಲ, ಬೇಡ ಎಂದಿದ್ದಕ್ಕೆ ಯುವತಿ ಮನೆಯವರ ವಿರುದ್ಧವೇ ತಿರುಗಿಬಿದ್ದಿದ್ದಳು. ಅಂತಿಮವಾಗಿ ಈ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದಾಗ ಯುವತಿಗೆ ಆಘಾತಕಾರಿ ವಿಷಯ ಗೊತ್ತಾಗಿದೆ. ಇನ್ನು ಯುವತಿಯ ಕುಟುಂಬಸ್ಥರೂ ಬೆಚ್ಚಿಬಿದ್ದಿದ್ದಾಳೆ.
ಏನಿದು ಪ್ರಕರಣ: ಬಂಟ್ವಾಳ ತಾಲೂಕಿನ ವಿಟ್ಲ ಪಡ್ನೂರು ಗ್ರಾಮದ ಯುವತಿಗೆ ನಾಲ್ಕು ವರ್ಷದ ಹಿಂದೆ ಫೇಸ್ಬುಕ್ನಲ್ಲಿ ಪ್ರದೀಪ್ ಎಂಬಾತನ ಪರಿಚಯವಾಗಿತ್ತು. ಸಿವಿಲ್ ಇಂಜಿನಿಯರ್ ಎಂದು ಆತ ಪರಿಚಯಿಸಿಕೊಂಡಿದ್ದ. ಆತನ ಮುಖ ನೋಡದೆ ಇದ್ದರೂ, ಆತನ ಪ್ರೀತಿಯ ಮಾತಿಗೆ ಮರುಳಾಗಿ ಪ್ರೇಮಪಾಶಕ್ಕೆ ಸಿಲುಕಿದ್ದಳು. ದಿನಾ ಕರೆ ಮಾಡಿ ಮದುವೆಯಾಗುವುದಾಗಿ ನಂಬಿಸುತ್ತಿದ್ದ. ಈ ವಿಚಾರವಾಗಿ ಯುವತಿ ಮನೆಮಂದಿಯೊಂದಿಗೆ ಜಗಳವಾಡುತ್ತಿದ್ದಳು. ಈ ಬಗ್ಗೆ ಯುವತಿಯ ತಾಯಿ, ವಕೀಲೆ ಶೈಲಜಾ ರಾಜೇಶ್ ಅವರಲ್ಲಿ ವಿಷಯ ತಿಳಿಸಿದ್ದರು. ಅವರು ಕೌನ್ಸೆಲಿಂಗ್ ಮಾಡಿದಾಗ ಯುವತಿ ಸಂಪೂರ್ಣವಾಗಿ ಪ್ರದೀಪ್ನ ಮೋಹಕ್ಕೆ ಒಳಗಾಗಿದ್ದಳು. ಮನವರಿಕೆ ಮಾಡಿದರೂ ಮಾತು ಕೇಳದಿದ್ದಾಗ ಶೈಲಜಾ ರಾಜೇಶ್ ಸೂಚನೆಯಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಾಗಿತ್ತು.
ವಿಟ್ಲ ಹಾಗೂ ಉಡುಪಿ ಜಿಲ್ಲೆ ಶಂಕರನಾರಾಯಣ ಠಾಣೆ ಪೊಲೀಸರ ಸಹಕಾರದೊಂದಿಗೆ ಸ್ವತಃ ಶೈಲಜಾ ರಾಜೇಶ್ ಅವರು ಯುವತಿಗೆ ಕರೆ ಮಾಡುತ್ತಿದ್ದಾತನ ಸಿದ್ದಾಪುರದ ಸ್ಥಳವನ್ನು ಪತ್ತೆ ಮಾಡಿ ಮನೆಗೆ ಭೇಟಿ ನೀಡಿದಾಗ ಅಚ್ಚರಿಯ ಅಂಶ ಬೆಳಕಿಗೆ ಬಂದಿದೆ. ಯುವತಿಯೊಂದಿಗೆ ಪ್ರದೀಪ್ ಎಂಬಾತನ ಹೆಸರಿನಲ್ಲಿ ಗಂಡಸಿನ ಧ್ವನಿಯಲ್ಲಿ ಮಾತನಾಡುತ್ತಿದ್ದದ್ದು ಜ್ಯೋತಿ ಎಂಬ ಹೆಸರಿನ ಮಂಗಳಮುಖಿ! ನಾಲ್ಕು ವರ್ಷದಿಂದ ಮನೆಮಂದಿಗೂ ತಲೆನೋವಾಗಿದ್ದ ಯುವತಿಯ ಪ್ರೇಮ ಪ್ರಕರಣ ಅಂತ್ಯ ಕಂಡಿದೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…