ಬಂಟ್ವಾಳ: ಸ್ಪಷ್ಟವಾದ ಕಾರಣವಿಲ್ಲದೆ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಯೋರ್ವ ಮನೆಯ ಬಚ್ಚಲು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಗಸ್ಟ್ 7 ರಂದು ಬುಧವಾರ ರಾತ್ರಿ ವೇಳೆ ನಡೆದಿದೆ.
ಬೆಂಜನಪದವು ಕರಾವಳಿ ಸೈಟ್ ನಿವಾಸಿ ಉದಯ ಆಚಾರ್ಯ ಅವರ ಮಗ ಭವಿಷ್ಯ ಆಚಾರ್ಯ (15) ಆತ್ಮಹತ್ಯೆ ಮಾಡಿಕೊಂಡ ಬಾಲಕ.
ಬಡಕಬೈಲಿನ ಖಾಸಗಿ ಶಾಲೆಯ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಯಾಗಿದ್ದ ಈತ ಕಲಿಕೆ ವಿಚಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬುದನ್ನು ಮನೆಯವರು ಶಂಕಿಸಿದ್ದಾರೆ.
ಅಗಸ್ಟ್ 7 ರಂದು ಬುಧವಾರ ರಾತ್ರಿ ಸುಮಾರು 7.30 ಗಂಟೆಗೆ ಸ್ನಾನ ಮಾಡಲೆಂದು ಬಚ್ಚಲು ಕೋಣೆಗೆ ತೆರಳಿದ ಮಗ 8 ಗಂಟೆಯಾದರೂ ವಾಪಸ್ ಬಾರದೇ ಇರುವುದನ್ನು ಕಂಡ ತಾಯಿ ಬಾಗಿಲು ಬಡಿದರೂ ಬಾಗಿಲು ತೆಗೆಯದ ಹಿನ್ನೆಲೆಯಲ್ಲಿ ಬಾಗಿಲು ಮುರಿದು ಒಳಗೆ ನುಗ್ಗಿದಾಗ ಈತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.
ಕೂಡಲೇ ಬಾಲಕನನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ಪರೀಕ್ಷೆ ನಡೆಸಿದಾಗ ಆತ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ.
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…