ರಾಮನಗರ: ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೀಡಿಯೋ ಮಾಡಿರುವ ಬಗ್ಗೆ ಕಣ್ಣೂರು ಮಠದ ಡಾ. ಮೃತ್ಯುಂಜಯ ಸ್ವಾಮೀಜಿ ತಪ್ಪೊಪ್ಪಿಕೊಂಡಿದ್ದಾರೆ.
ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಗಡಿ ಪೊಲೀಸರು ಬಿರುಸಿನ ತನಿಖೆ ನಡೆಸುತ್ತಿದ್ದಾರೆ. ಇದೀಗ ವೀಡಿಯೋ ಮಾಡಿರುವ ವಿಚಾರವಾಗಿ ಡಾ. ಮೃತ್ಯುಂಜಯ ಶ್ರೀ ಅವರನ್ನು ತೀವ್ರ ವಿಚಾರಣೆಗೊಳಪಡಿಸಲಾಗಿದ್ದು, ವೀಡಿಯೋ ಮಾಡಿರುವ ಬಗ್ಗೆ ಅವರು ತಪ್ಪೊಪ್ಪಿಕೊಂಡಿದ್ದಾರೆ. ಪೊಲೀಸರ ವಿಚಾರಣೆ ವೇಳೆ ತನ್ನಿಂದ ತಪ್ಪಾಗಿದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಮೂರು ದಿನಗಳಿಂದ ಇವರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಇತರ ಸ್ವಾಮೀಜಿಗಳನ್ನು ತಾನು ಟಾರ್ಗೆಟ್ ಮಾಡಿಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ.
ನನ್ನ ತಮ್ಮನ ಮಗನ ಅಪಹರಣ ಮಾಡಲಾಗಿದೆ..ಇದೊಂದು ಯೋಜಿತವಾಗಿ ನಡೆದ ಕಿಡ್ನಾಪ್: ರೇಣುಕಾಚಾರ್ಯ – Vishwanews24
ಇನ್ನು ಪ್ರಕರಣದ ಎರಡನೇ ಆರೋಪಿಯಾಗಿರು ನೀಲಾಂಬಿಕೆ ಅಲಿಯಾಸ್ ಚಂದು ವೀಡಿಯೋ ಚಿತ್ರೀಕರಣ ಮಾಡಿರುವ ಮೊಬೈಲ್ನ್ನೇ ನಾಶ ಪಡಿಸಿರುವ ಅನುಮಾನ ಪೊಲೀಸರಿಗೆ ವ್ಯಕ್ತವಾಗಿದೆ. ಪ್ರಸ್ತುತ ಆಕೆ ಹೊಸ ಮೊಬೈಲ್ ಉಪಯೋಗಿಸುತ್ತಿದ್ದಾಳೆ ಎಂಬ ಶಂಕೆಯೂ ಇದ್ದು, ಆಕೆಯನ್ನು ಪೊಲೀಸರು ತೀವ್ರವಾಗಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…