ಉಡುಪಿ

ಬಂದ್‌ಗೆ ಉಡುಪಿ, ದ.ಕ. ಬಿಜೆಪಿ ಬೆಂಬಲ

ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ರಾಜ್ಯದ ರೈತರ ಸಾಲಮನ್ನಾ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಕುಮಾರ ಸ್ವಾಮಿ, ಇದೀಗ ಸಾಲಮನ್ನಾಕ್ಕೆ ಮೀನಮೇಷ ಎಣಿಸುತ್ತಿರುವುದನ್ನು ವಿರೋಧಿಸಿ ಸೋಮವಾರ ರಾಜ್ಯದ ರೈತರು ಕರೆ ನೀಡಿದ ಬಂದ್‌ಗೆ ದ.ಕ ಹಾಗೂ ಉಡುಪಿ ಜಿಲ್ಲಾ ಬಿಜೆಪಿ ಬೆಂಬಲ ಸೂಚಿಸಿದೆ.

ರೈತರು ಸಹಕಾರಿ ಸಂಘಗಳಲ್ಲಿ, ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ, ಖಾಸಗಿಯಾಗಿ ಮಾಡಿರುವ ಸುಮಾರು 53 ಸಾವಿರ ಕೋಟಿ ರೂ. ಸಾಲವನ್ನು 24 ಗಂಟೆಯಲ್ಲಿ ಮನ್ನಾ ಮಡುತ್ತೇನೆ ಎಂದು ಹೇಳಿದ್ದರು. ಆದರೆ ಅಧಿಕಾರ ಪಡೆದ ಮೊದಲ ದಿನವೇ ಅವರು ತಮ್ಮ ಹೇಳಿಕೆಯಿಂದ ಹಿಂದೆ ಸರಿದಿದ್ದಾರೆ. ಆದ್ದರಿಂದ ರೈತರು ಕರೆ ನೀಡಿರುವ ಬಂದನ್ನು ಯಶಸ್ವಿಗೊಳಿಸಬೇಕು, ಜಿಲ್ಲಾದ್ಯಂತ ಸ್ವಯಂ ಪ್ರೇರಿತರಾಗಿ ಶಾಂತಿಯುತವಾಗಿ ಬಂದ್ ಆಚರಿಸಬೇಕು ಎಂದು ದ.ಕ. ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ವಿನಂತಿಸಿದ್ದಾರೆ.

ಶಾಸಕರ ಮನವಿ: ರೈತ ವಿರೋಧಿ ಸರ್ಕಾರದ ವಿರುದ್ಧ ಸ್ವಯಂ ಪ್ರೇರಿತ ಕರ್ನಾಟಕ ಬಂದ್ ಕರೆಗೆ ಕರಾವಳಿಯ ಪ್ರಜ್ಞಾವಂತ ನಾಗರಿಕರು ಸ್ಪಂದನೆ ನೀಡಿ ಬಂದ್‌ಗೆ ಸಹಕರಿಸಬೇಕಾಗಿ ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ ಮನವಿ ಮಾಡಿದ್ದಾರೆ.

ಸಿಟಿ ಬಸ್ ಬಂದ್ ಇಲ್ಲ
ದ.ಕ. ಜಿಲ್ಲೆಯಲ್ಲಿ ಬಂದ್ ಕುರಿತಂತೆ ಯಾವುದೇ ಸಂಘಟನೆಗಳು ಅಧಿಕೃತವಾಗಿ ಪ್ರಟಕಣೆ ಹೊರಡಿಸಿಲ್ಲ. ಬಸ್ ಬಂದ್ ಮಾಡುವಂತೆಯೂ ನಮ್ಮ ಬಳಿ ಮಾತುಕತೆ ನಡೆಸಿಲ್ಲ. ಶಾಲಾರಂಭ ಹಾಗೂ ಪರೀಕ್ಷೆಗಳು ನಡೆಯುತ್ತಿರುವುದರಿಂದ ಬಸ್ ಸಂಚಾರ ರದ್ದುಗೊಳಿಸಿದರೆ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಲಿದೆ. ಆದ್ದರಿಂದ ನಗರಾದ್ಯಂತ ಬಸ್‌ಗಳು ಎಂದಿನಂತೆ ಸಂಚರಿಸಲಿವೆ. ಅಹಿತರ ಘಟನೆಗಳು ಸಂಭವಿಸಿದರೆ ಸಂಚಾರ ಮೊಟಕುಗೊಳಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಟಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಅಜೀಜ್ ಪರ್ತಿ ಪಾಡಿ ತಿಳಿಸಿದ್ದಾರೆ. ಸರ್ವೀಸ್ ಹಾಗೂ ಎಕ್ಸ್‌ಪ್ರೆಸ್ ಬಸ್ ಮಾಲೀಕರ ಸಂಘವೂ ಇದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದೆ.
ಖಾಸಗಿ ಬಸ್ ಸೇವೆ ಯಥಾಸ್ಥಿತಿ: ಖಾಸಗಿ ಬಸ್ ಸೇವೆ ಉಡುಪಿ ಜಿಲ್ಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಿದೆ. ಬಂದ್ ಬೆಂಬಲಿಸಿ ಸೇವೆ ನಿಲ್ಲಿಸುವ ಬಗ್ಗೆ ಸಿಟಿ ಮತ್ತು ಸರ್ವಿಸ್ ಬಸ್ಸು ಮಾಲೀಕರ ಸಂಘ ನಿರ್ಣಯ ಕೈಗೊಂಡಿಲ್ಲ ಎಂದು ಮೂಲಗಳು ತಿಳಿಸಿವೆ. ಒಂದು ವೇಳೆ ಕೆಲವು ಬಸ್ಸು ಮಾಲೀಕರು ಸ್ವಯಂಪ್ರೇರಿತರಾಗಿ ಸೇವೆ ನಿಲ್ಲಿಸುವ ಸಾಧ್ಯತೆ ಇರಬಹುದು ಎಂದು ಬಸ್ ಮಾಲೀಕರೊಬ್ಬರು  ತಿಳಿಸಿದ್ದಾರೆ.

Vishwa News 24

Recent Posts

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 hour ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

2 hours ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

2 hours ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

2 hours ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

2 hours ago

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

3 hours ago