ಉಡುಪಿ

ಬಂದ್‌ಗೆ ಉಡುಪಿ, ದ.ಕ. ಬಿಜೆಪಿ ಬೆಂಬಲ

ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ರಾಜ್ಯದ ರೈತರ ಸಾಲಮನ್ನಾ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಕುಮಾರ ಸ್ವಾಮಿ, ಇದೀಗ ಸಾಲಮನ್ನಾಕ್ಕೆ ಮೀನಮೇಷ ಎಣಿಸುತ್ತಿರುವುದನ್ನು ವಿರೋಧಿಸಿ ಸೋಮವಾರ ರಾಜ್ಯದ ರೈತರು ಕರೆ ನೀಡಿದ ಬಂದ್‌ಗೆ ದ.ಕ ಹಾಗೂ ಉಡುಪಿ ಜಿಲ್ಲಾ ಬಿಜೆಪಿ ಬೆಂಬಲ ಸೂಚಿಸಿದೆ.

ರೈತರು ಸಹಕಾರಿ ಸಂಘಗಳಲ್ಲಿ, ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ, ಖಾಸಗಿಯಾಗಿ ಮಾಡಿರುವ ಸುಮಾರು 53 ಸಾವಿರ ಕೋಟಿ ರೂ. ಸಾಲವನ್ನು 24 ಗಂಟೆಯಲ್ಲಿ ಮನ್ನಾ ಮಡುತ್ತೇನೆ ಎಂದು ಹೇಳಿದ್ದರು. ಆದರೆ ಅಧಿಕಾರ ಪಡೆದ ಮೊದಲ ದಿನವೇ ಅವರು ತಮ್ಮ ಹೇಳಿಕೆಯಿಂದ ಹಿಂದೆ ಸರಿದಿದ್ದಾರೆ. ಆದ್ದರಿಂದ ರೈತರು ಕರೆ ನೀಡಿರುವ ಬಂದನ್ನು ಯಶಸ್ವಿಗೊಳಿಸಬೇಕು, ಜಿಲ್ಲಾದ್ಯಂತ ಸ್ವಯಂ ಪ್ರೇರಿತರಾಗಿ ಶಾಂತಿಯುತವಾಗಿ ಬಂದ್ ಆಚರಿಸಬೇಕು ಎಂದು ದ.ಕ. ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ವಿನಂತಿಸಿದ್ದಾರೆ.

ಶಾಸಕರ ಮನವಿ: ರೈತ ವಿರೋಧಿ ಸರ್ಕಾರದ ವಿರುದ್ಧ ಸ್ವಯಂ ಪ್ರೇರಿತ ಕರ್ನಾಟಕ ಬಂದ್ ಕರೆಗೆ ಕರಾವಳಿಯ ಪ್ರಜ್ಞಾವಂತ ನಾಗರಿಕರು ಸ್ಪಂದನೆ ನೀಡಿ ಬಂದ್‌ಗೆ ಸಹಕರಿಸಬೇಕಾಗಿ ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ ಮನವಿ ಮಾಡಿದ್ದಾರೆ.

ಸಿಟಿ ಬಸ್ ಬಂದ್ ಇಲ್ಲ
ದ.ಕ. ಜಿಲ್ಲೆಯಲ್ಲಿ ಬಂದ್ ಕುರಿತಂತೆ ಯಾವುದೇ ಸಂಘಟನೆಗಳು ಅಧಿಕೃತವಾಗಿ ಪ್ರಟಕಣೆ ಹೊರಡಿಸಿಲ್ಲ. ಬಸ್ ಬಂದ್ ಮಾಡುವಂತೆಯೂ ನಮ್ಮ ಬಳಿ ಮಾತುಕತೆ ನಡೆಸಿಲ್ಲ. ಶಾಲಾರಂಭ ಹಾಗೂ ಪರೀಕ್ಷೆಗಳು ನಡೆಯುತ್ತಿರುವುದರಿಂದ ಬಸ್ ಸಂಚಾರ ರದ್ದುಗೊಳಿಸಿದರೆ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಲಿದೆ. ಆದ್ದರಿಂದ ನಗರಾದ್ಯಂತ ಬಸ್‌ಗಳು ಎಂದಿನಂತೆ ಸಂಚರಿಸಲಿವೆ. ಅಹಿತರ ಘಟನೆಗಳು ಸಂಭವಿಸಿದರೆ ಸಂಚಾರ ಮೊಟಕುಗೊಳಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಟಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಅಜೀಜ್ ಪರ್ತಿ ಪಾಡಿ ತಿಳಿಸಿದ್ದಾರೆ. ಸರ್ವೀಸ್ ಹಾಗೂ ಎಕ್ಸ್‌ಪ್ರೆಸ್ ಬಸ್ ಮಾಲೀಕರ ಸಂಘವೂ ಇದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದೆ.
ಖಾಸಗಿ ಬಸ್ ಸೇವೆ ಯಥಾಸ್ಥಿತಿ: ಖಾಸಗಿ ಬಸ್ ಸೇವೆ ಉಡುಪಿ ಜಿಲ್ಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಿದೆ. ಬಂದ್ ಬೆಂಬಲಿಸಿ ಸೇವೆ ನಿಲ್ಲಿಸುವ ಬಗ್ಗೆ ಸಿಟಿ ಮತ್ತು ಸರ್ವಿಸ್ ಬಸ್ಸು ಮಾಲೀಕರ ಸಂಘ ನಿರ್ಣಯ ಕೈಗೊಂಡಿಲ್ಲ ಎಂದು ಮೂಲಗಳು ತಿಳಿಸಿವೆ. ಒಂದು ವೇಳೆ ಕೆಲವು ಬಸ್ಸು ಮಾಲೀಕರು ಸ್ವಯಂಪ್ರೇರಿತರಾಗಿ ಸೇವೆ ನಿಲ್ಲಿಸುವ ಸಾಧ್ಯತೆ ಇರಬಹುದು ಎಂದು ಬಸ್ ಮಾಲೀಕರೊಬ್ಬರು  ತಿಳಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

7 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

8 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago