ಬಂದ್, ಪ್ರತಿಭಟನೆ ಅವರ ಹಕ್ಕು, ಶಾಂತಿಯುತವಾಗಿ ಮಾಡಿಕೊಳ್ಳಲಿ : ಸಿದ್ದರಾಮಯ್ಯ – Vishwanews24
ಹೈಕೋರ್ಟ್ ತೀರ್ಪು ಹಿಜಾಬ್ ಪರವಿರುವವರಿಗೆ ಅಸಮಾಧಾನ ತಂದಿದೆ. ಹಾಗಾಗಿ ಬಂದ್ ಮಾಡುತ್ತಿದ್ದಾರೆ..
ಬೆಂಗಳೂರು, : ಹಿಜಾಬ್ ಕುರಿತಾಗಿ ಹೈಕೋರ್ಟ್ ನೀಡಿದ ತೀರ್ಪು ಹಿಜಾಬ್ ಪರವಿರುವವರಿಗೆ ಅಸಮಾಧಾನ ತಂದಿದೆ. ಹಾಗಾಗಿ ಬಂದ್ ಮಾಡುತ್ತಿದ್ದಾರೆ. ಬಂದ್, ಪ್ರತಿಭಟನೆ ಅವರ ಹಕ್ಕು, ಶಾಂತಿಯುತವಾಗಿ ಮಾಡಿಕೊಳ್ಳಲಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋರ್ಟ್ ಆದೇಶ ಧಿಕ್ಕರಿಸುತ್ತೇವೆ ಎಂದು ಅವರು ಹೇಳಿಲ್ಲ. ಅವರಿಗೆ ತೀರ್ಪಿನ ಬಗ್ಗೆ ಅಸಮಾಧಾನ ಇದೆ. ಹಾಗಾಗಿ ಶಾಂತಿಯುತ ಬಂದ್ ಆಚರಿಸುತ್ತೇವೆ ಎಂದಿದ್ದಾರೆ. ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಎಲ್ಲರಿಗೂ ಅವಕಾಶ ಇದೆ ಎಂದರು.
