Featured

ಬಕ್ರೀದ್ ಹಬ್ಬಕ್ಕೆ ಗೋವುಗಳ ಬಲಿ ಬೇಡ: ಸಚಿವ ಪ್ರಭು ಚವ್ಹಾಣ್ – Vishwanews24

ಬಕ್ರೀದ್ ಹಬ್ಬಕ್ಕೆ ಗೋವುಗಳ ಬಲಿ ಬೇಡ: ಸಚಿವ ಪ್ರಭು ಚವ್ಹಾಣ್ – Vishwanews24

ಗೋಹತ್ಯೆ ಕಂಡುಬಂದರೆ ಶಿಸ್ತುಕ್ರಮ..

ಬೆಂಗಳೂರು: ಬಕ್ರೀದ್ ಹಬ್ಬ ಎದುರಾಗುತ್ತಿದೆ ತ್ಯಾಗ ಮತ್ತು ಬಲಿದಾನದ ಹಬ್ಬ ಎಂದೇ ಕರೆಯುವ ಬಕ್ರೀದ್ ಹಬ್ಬದ ಸಮಯದಲ್ಲಿ ಸಹಜವಾಗಿಯೇ ಪ್ರಾಣಿಗಳ ಬಲಿ ನೀಡಲಾಗುತ್ತದೆ ಆದರೆ ರಾಜ್ಯದಲ್ಲಿ ಈಗಾಗಲೇ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ. ರಾಜ್ಯದಿಂದ ಹೊರಗಡೆ ಅಥವಾ ಹೊರ ರಾಜ್ಯದಿಂದ ನಮ್ಮ ರಾಜ್ಯಕ್ಕೆ ಯಾವುದೇ ಮಾರ್ಗದಿಂದ ಅಕ್ರಮ ಗೋವುಗಳು ಮತ್ತು ಗೋಮಾಂಸ ಸಾಗಿಸುವುದರ ಮೇಲೆ ಇಲಾಖೆಯ ಅಧಿಕಾರಿಗಳು ಹದ್ದಿನ ಕಣ್ಣಿಡಲು ಸಚಿವ ಪ್ರಭು ಚೌಹಾಣ್ ಇಲಾಖೆಯ ಎಲ್ಲ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಾಮಾನ್ಯವಾಗಿ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಬಲಿಕೊಡುವ ಸಂಪ್ರದಾಯವಿದ್ದು ಇದಕ್ಕಾಗಿ ಗೋವುಗಳನ್ನು ಸಹ ಬಳಕೆಮಾಡಲಾಗುತ್ತದೆ ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಗೋಹತ್ಯೆ ನಿಷೇಧ ಅನುಷ್ಠಾನ ಆಗಿರುವುದರಿಂದ ಗೋವುಗಳ ಹತ್ಯೆ ಯಾವುದೇ ಕಾರಣಕ್ಕೂ ನಡೆಯದಂತೆ ನೋಡಿಕೊಳ್ಳಲು ಪೊಲೀಸ್ ಇಲಾಖೆ ಹಾಗೂ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ತಿಳಿಸಲಾಗಿದೆ.

ರಾಜ್ಯದ ಎಲ್ಲ ಗಡಿಭಾಗಗಳಲ್ಲಿ ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಕಟ್ಟೆಚ್ಚರ ವಹಿಸಲು ತಿಳಿಸಲಾಗಿದ್ದು ಗೋಹತ್ಯೆ ನಿಷೇಧ ಕಾಯ್ದೆಯ ಉಲ್ಲಂಘನೆ ಆಗದಂತೆ ನೋಡಿಕೊಳ್ಳಲು ಸೂಚನೆ ನೀಡಲಾಗಿದೆ.

ಒಂದು ವೇಳೆ ಎಲ್ಲಾದರೂ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿರುವುದು ಕಂಡುಬಂದಲ್ಲಿ ಗೋಪಾಲಕರು ಗೋರಕ್ಷಕರು ಹಾಗೂ ಸಾರ್ವಜನಿಕರು ಪಶುಸಂಗೋಪನೆ ಇಲಾಖೆಯ ಪ್ರಾಣಿ ಕಲ್ಯಾಣ ಸಹಾಯವಾಣಿಗೆ ತಿಳಿಸಿ ಅಥವಾ ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಿ ಆದರೆ ಯಾವುದೇ ಕಾರಣಕ್ಕೂ ಕಾನೂನನ್ನು ಕೈಗೆತ್ತಿಕೊಳ್ಳುವುದು ಬೇಡ ಎಂದು ಸಚಿವರು ಮನವಿ ಮಾಡಿದ್ದಾರೆ.

ಸಮನ್ವಯತೆಯಿಂದ ಕಾರ್ಯನಿರ್ವಹಿಸಿ:

ಈಗಾಗಲೇ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಈ ಕುರಿತಾಗಿ ಸಭೆಗಳು ನಡೆದಿದ್ದು ಗಡಿಭಾಗದಲ್ಲಿ ಪೊಲೀಸ್ ಇಲಾಖೆಯ ಜೊತೆಗೆ ಸೇರಿ ಕಟ್ಟುನಿಟ್ಟಿನ ನಿಗಾ ಇಡಲು ತಿಳಿಸಿದ್ದಾರೆ.

ಪ್ರಾಣಿ ಕಲ್ಯಾಣ ಮಂಡಳಿಗೆ ಸದಸ್ಯರಿಗೆ ವಲಯವಾರು ಜವಾಬ್ದಾರಿ ಹಂಚಿಕೆ ಮಾಡಲಾಗಿದ್ದು ಜಿಲ್ಲಾ ಎಸ್.ಪಿ ಸಿ.ಎ ಜೊತೆಗೆ ಸಮನ್ವಯ ಸಾಧಿಸಿ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಅಕ್ರಮ ಗೋವುಗಳ ಸಾಗಣೆ ಆಗದಂತೆ ನೋಡಿಕೊಳ್ಳಲು ತಿಳಿಸಲಾಗಿದೆ.

ಗೋಹತ್ಯೆ ಕಂಡುಬಂದರೆ ಶಿಸ್ತುಕ್ರಮ..

ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾವಾರು ಜವಾಬ್ದಾರಿ ನೀಡಲಾಗಿದ್ದು ಅವರಿಗೆ ಸಂಬಂಧಪಟ್ಟ ಪ್ರದೇಶದಲ್ಲಿ ಗೋಹತ್ಯೆ ನಡೆದಿದ್ದು ಕಂಡುಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.

ವದಂತಿಗಳಿಗೆ ಕಿವಿ ಕೊಡಬೇಡಿ:

ಸಮಾಜದಲ್ಲಿ ಸಾಮಾಜಿಕ ಸಾಮರಸ್ಯ ಕದಡಲು ಅನೇಕರು ಸಾಮಾಜಿಕ ಜಾಲತಾಣವನ್ನು ಮಾಧ್ಯಮವಾಗಿ ಸುಳ್ಳು ಸುದ್ದಿಗಳನ್ನು ಹರಿಬಿಡುತ್ತಾರೆ ಗೋಹತ್ಯೆ ಕುರಿತಾಗಿ ಯಾವುದೇ ಸುಳ್ಳು ಸುದ್ದಿ ಅಥವಾ ಸಂದೇಶಗಳನ್ನು ಹರಿಬಿಡುವುದು ಸಮಾಜದಲ್ಲಿ ಅಶಾಂತಿ ನಿರ್ಮಿಸಲು ಪ್ರಯತ್ನಿಸುವುದು ಕಂಡುಬಂದಲ್ಲಿ ಪೊಲೀಸ್ ಇಲಾಖೆ ಅಂಥವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಿದೆ ಎಂದು ಸಚಿವರು ತಿಳಿಸಿದ್ದಾರೆ.

 

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

15 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

15 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

16 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

16 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

16 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

16 hours ago