Featured

ಬಕ್ರೀದ್ ಹಬ್ಬದಲ್ಲಿ ಗೋವುಗಳನ್ನು ಬಲಿ ಕೊಡಬೇಡಿ : ಮುಸ್ಲಿಂ ಬಾಂಧವರ ಬಳಿ ಮನವಿ ಮಾಡಿದ ತೆಲಂಗಾಣ ಗೃಹ ಸಚಿವ ಮಹಮೂದ್ ಅಲಿ -Vishwanews24

ಹೈದರಾಬಾದ್: ಬಕ್ರೀದ್ ಎಂದು ಜನಪ್ರಿಯವಾಗಿರುವ ಈದ್ ಅಲ್-ಅಧಾ ಹಬ್ಬದಲ್ಲಿ ಗೋವುಗಳನ್ನು ಬಲಿ ಕೊಡಬೇಡಿ ಎಂದು ತೆಲಂಗಾಣ ಗೃಹ ಸಚಿವ ಮಹಮೂದ್ ಅಲಿ ಅವರು ಮುಸ್ಲಿಂ ಬಾಂಧವರ ಬಳಿ ಮನವಿ ಮಾಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಒಂದು ನಿರ್ದಿಷ್ಟ ಸಮುದಾಯದ ಜನರು ಗೋವುಗಳನ್ನು ಪೂಜಿಸುತ್ತಾರೆ. ಅವರ ನಂಬಿಕೆಯನ್ನು ನಾವು ಗೌರವಿಸಬೇಕು. ಹೀಗಾಗಿ ಬಕ್ರೀದ್ ಸಮಯದಲ್ಲಿ ಗೋವುಗಳನ್ನು ಬಲಿ ಕೊಡಬೇಡಿ ಎಂದು ಮುಸ್ಲಿಂ ಬಾಂಧವರ ಬಳಿ ಕೇಳಿಕೊಂಡರು.

ನಾನು ಎಲ್ಲಾ ಮುಸ್ಲಿಂ ಸಹೋದರರಿಗೆ ಗೋವುಗಳ ಬಲಿ ಕೊಡುವುದನ್ನು ತಪ್ಪಿಸಬೇಕೆಂದು ಮನವಿ ಮಾಡುತ್ತೇನೆ. ಹಸುವನ್ನು ಒಂದು ಧರ್ಮದಲ್ಲಿ ಗೌರವಿಸಲಾಗುತ್ತದೆ ಮತ್ತು ಪೂಜಿಸಲಾಗುತ್ತದೆ. ಮುಸ್ಲಿಂ ಬಾಂಧವರು ಗೋವುಗಳ ಬದಲಿಗೆ ಆಡು ಮತ್ತು ಇತರೆ ಸಣ್ಣ ಪ್ರಾಣಿಗಳನ್ನು ಹಬ್ಬದಲ್ಲಿ ಬಲಿ ಕೊಡಲು ಬಳಸಬಹುದು ಎಂದು ಅಲಿ ಅವರು ಸಲಹೆ ನೀಡಿದರು.

ಈ ಬಾರಿ ಬಕ್ರೀದ್ ಹಬ್ಬವನ್ನು ಆಗಸ್ಟ್ 11ರಂದು ಆಚರಿಸಲಾಗುತ್ತಿದ್ದು, ಹಬ್ಬದಲ್ಲಿ ಪ್ರಾಣಿ ಬಲಿ ನೀಡುವುದು ಸಂಪ್ರದಾಯವಾಗಿದೆ. ಹೀಗಾಗಿ ಬಕ್ರೀದ್ ಹಬ್ಬಕ್ಕೆ ಗೋವುಗಳನ್ನು ಬಲಿ ನೀಡುವವರ ವಿರುದ್ಧ ಕಾನೂನಿನ ತನ್ನ ಕ್ರಮವನ್ನು ಕೈಗೊಳ್ಳಲಾಗುತ್ತದೆ. ಅಲ್ಲದೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ರಾಜ್ಯದಲ್ಲಿ ಪೊಲೀಸರು ಜಾಗರೂಕರಾಗಿದ್ದಾರೆ. ಕಳೆದ ಬಾರಿ ಎಲ್ಲಾ ಸಾರಿಗೆ ವಾಹನಗಳನ್ನು ಪೊಲೀಸರು ಪರಿಶೀಲನೆ ಮಾಡಿದ್ದರು. ಆದ್ದರಿಂದ ಗೋವುಗಳ ಬಲಿ ಪಡೆಯಬೇಡಿ ಎಂದು ಸೂಚಿಸಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago