Featured

ಬಕ್ರೀದ್ ಹಬ್ಬದಲ್ಲಿ ಗೋವುಗಳನ್ನು ಬಲಿ ಕೊಡಬೇಡಿ : ಮುಸ್ಲಿಂ ಬಾಂಧವರ ಬಳಿ ಮನವಿ ಮಾಡಿದ ತೆಲಂಗಾಣ ಗೃಹ ಸಚಿವ ಮಹಮೂದ್ ಅಲಿ -Vishwanews24

ಹೈದರಾಬಾದ್: ಬಕ್ರೀದ್ ಎಂದು ಜನಪ್ರಿಯವಾಗಿರುವ ಈದ್ ಅಲ್-ಅಧಾ ಹಬ್ಬದಲ್ಲಿ ಗೋವುಗಳನ್ನು ಬಲಿ ಕೊಡಬೇಡಿ ಎಂದು ತೆಲಂಗಾಣ ಗೃಹ ಸಚಿವ ಮಹಮೂದ್ ಅಲಿ ಅವರು ಮುಸ್ಲಿಂ ಬಾಂಧವರ ಬಳಿ ಮನವಿ ಮಾಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಒಂದು ನಿರ್ದಿಷ್ಟ ಸಮುದಾಯದ ಜನರು ಗೋವುಗಳನ್ನು ಪೂಜಿಸುತ್ತಾರೆ. ಅವರ ನಂಬಿಕೆಯನ್ನು ನಾವು ಗೌರವಿಸಬೇಕು. ಹೀಗಾಗಿ ಬಕ್ರೀದ್ ಸಮಯದಲ್ಲಿ ಗೋವುಗಳನ್ನು ಬಲಿ ಕೊಡಬೇಡಿ ಎಂದು ಮುಸ್ಲಿಂ ಬಾಂಧವರ ಬಳಿ ಕೇಳಿಕೊಂಡರು.

ನಾನು ಎಲ್ಲಾ ಮುಸ್ಲಿಂ ಸಹೋದರರಿಗೆ ಗೋವುಗಳ ಬಲಿ ಕೊಡುವುದನ್ನು ತಪ್ಪಿಸಬೇಕೆಂದು ಮನವಿ ಮಾಡುತ್ತೇನೆ. ಹಸುವನ್ನು ಒಂದು ಧರ್ಮದಲ್ಲಿ ಗೌರವಿಸಲಾಗುತ್ತದೆ ಮತ್ತು ಪೂಜಿಸಲಾಗುತ್ತದೆ. ಮುಸ್ಲಿಂ ಬಾಂಧವರು ಗೋವುಗಳ ಬದಲಿಗೆ ಆಡು ಮತ್ತು ಇತರೆ ಸಣ್ಣ ಪ್ರಾಣಿಗಳನ್ನು ಹಬ್ಬದಲ್ಲಿ ಬಲಿ ಕೊಡಲು ಬಳಸಬಹುದು ಎಂದು ಅಲಿ ಅವರು ಸಲಹೆ ನೀಡಿದರು.

ಈ ಬಾರಿ ಬಕ್ರೀದ್ ಹಬ್ಬವನ್ನು ಆಗಸ್ಟ್ 11ರಂದು ಆಚರಿಸಲಾಗುತ್ತಿದ್ದು, ಹಬ್ಬದಲ್ಲಿ ಪ್ರಾಣಿ ಬಲಿ ನೀಡುವುದು ಸಂಪ್ರದಾಯವಾಗಿದೆ. ಹೀಗಾಗಿ ಬಕ್ರೀದ್ ಹಬ್ಬಕ್ಕೆ ಗೋವುಗಳನ್ನು ಬಲಿ ನೀಡುವವರ ವಿರುದ್ಧ ಕಾನೂನಿನ ತನ್ನ ಕ್ರಮವನ್ನು ಕೈಗೊಳ್ಳಲಾಗುತ್ತದೆ. ಅಲ್ಲದೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ರಾಜ್ಯದಲ್ಲಿ ಪೊಲೀಸರು ಜಾಗರೂಕರಾಗಿದ್ದಾರೆ. ಕಳೆದ ಬಾರಿ ಎಲ್ಲಾ ಸಾರಿಗೆ ವಾಹನಗಳನ್ನು ಪೊಲೀಸರು ಪರಿಶೀಲನೆ ಮಾಡಿದ್ದರು. ಆದ್ದರಿಂದ ಗೋವುಗಳ ಬಲಿ ಪಡೆಯಬೇಡಿ ಎಂದು ಸೂಚಿಸಿದರು.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

5 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

5 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

6 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

7 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

7 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

7 hours ago