ಬೆಂಗಳೂರು : ರಾಜ್ಯದೊಳಗಿನ ಯಾವುದೇ ವಿಚಾರಗಳನ್ನು ರಾಜ್ಯ ಮಟ್ಟದಲ್ಲೇ ಬಗೆಹರಿಸಿಕೊಳ್ಳಲು ನಮ್ಮಲ್ಲಿ ಸಮಸ್ಯೆಯೇ ಇಲ್ಲ. ಅನಾವಶ್ಯಕ ಗೊಂದಲವನ್ನು ಸೃಷ್ಟಿಸುತ್ತಿರುವುದು ಮಾಧ್ಯಮಗಳೇ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು “ರಾಜ್ಯದ ಸ್ಥಳೀಯ ಸಮಸ್ಯೆಯನ್ನು ಸ್ಥಳೀಯ ನಾಯಕರೇ ಬಗೆಹರಿಸಿಕೊಳ್ಳಬೇಕು” ಎಂದು ನೀಡಿದ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್, ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, “ನಮ್ಮಲ್ಲಿ ಸಮಸ್ಯೆಯೇ ಇಲ್ಲ. ಇನ್ನು ಬಗೆಹರಿಸಿಕೊಳ್ಳುವುದೇನು ಇದೆ? ನಾನು ಹೇಳಬೇಕಾದದ್ದನ್ನು ಮುಖ್ಯಮಂತ್ರಿಗಳಿಗೂ ಹೇಳಿದ್ದೇನೆ, ಮಲ್ಲಿಕಾರ್ಜುನ ಖರ್ಗೆ ಸಾಹೇಬರಿಗೂ ಹೇಳಿದ್ದೇನೆ. ಸಮಸ್ಯೆ ಸೃಷ್ಟಿಸುತ್ತಿರುವುದು ನೀವೇ (ಮಾಧ್ಯಮ)” ಎಂದು ಸ್ಪಷ್ಟಪಡಿಸಿದರು.
ಕಳೆದ ಒಂದು ತಿಂಗಳಿನಿಂದ ರಾಜ್ಯದಲ್ಲಿ ಅಧಿಕಾರ ಹಸ್ತಾಂತರ, ಕುರ್ಚಿ ಕಿತ್ತಾಟದ ಬಗ್ಗೆ ಉಭಯ ಬಣಗಳಿಂದ ಹೇಳಿಕೆ–ಪ್ರತಿಹೇಳಿಕೆಗಳು ಮುಂದುವರಿದಿದ್ದವು. ಈ ವಿಚಾರ ಸದನದಲ್ಲಿಯೂ ಪ್ರತಿಧ್ವನಿಸಿತ್ತು. ಹೈಕಮಾಂಡ್ ಸೂಚನೆ ಬರುವವರೆಗೂ ತಾನೇ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಈ ನಡುವೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಇಬ್ಬರೂ ಹೈಕಮಾಂಡ್ನತ್ತ ಗಮನ ಹರಿಸುತ್ತಿರುವ ಸಂದರ್ಭದಲ್ಲೇ, ಮಲ್ಲಿಕಾರ್ಜುನ ಖರ್ಗೆ ಅವರು ಸ್ಥಳೀಯವಾಗಿಯೇ ವಿಚಾರ ಬಗೆಹರಿಸಿಕೊಳ್ಳುವಂತೆ ಸಲಹೆ ನೀಡಿದ್ದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…