Featured

ಬಜರಂಗದಳದ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹೇಳಿಕೆ : ಕ್ಷಮೆ ಕೇಳಿದ ಆರ್.ಅಶೋಕ್ – Vishwanews24

ನಾನೂ ಕೂಡ ಬಜರಂಗದಳದ ಕಾರ್ಯಕರ್ತ , ನನ್ನ ಹೇಳಿಕೆಯಿಂದ ಬಜರಂಗದಳದವರಿಗೆ ನೋವಾಗಿದ್ದರೆ ವಿಷಾದಿಸುತ್ತೇನೆ : ಕ್ಷಮೆ ಕೇಳಿದ ಆರ್.ಅಶೋಕ್

ಬೆಂಗಳೂರು: ವಿಧಾನಸಭೆ ಅಧಿವೇಶನದಲ್ಲಿ ಮಾತನಾಡುವಾಗ ಮಂಗಳೂರಿನ ಪಬ್ ದಾಳಿ ಪ್ರಕರಣದಲ್ಲಿನಾನು ಬಜರಂಗದಳದ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ ಎನ್ನುವ ಹೇಳಿಕೆ ನೀಡಿದ್ದಕ್ಕಾಗಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಕ್ಷಮೆ ಯಾಚಿಸಿದ್ದಾರೆ.

ಸದನದಲ್ಲಿ ಅಶೋಕ್ ನೀಡಿದ್ದ ಹೇಳಿಕೆ ಖಂಡಿಸಿ ವಿಹೆಚ್‌ಪಿ ಕಾರ್ಯದರ್ಶಿ ಶರಣ್ ಪಂಪ್‌ವೆಲ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ದೂರು ನೀಡಿದರು. ಅಶೋಕ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು. ಇದರ ಬೆನ್ನಲ್ಲೇ ಅಶೋಕ್ ಮಾಧ್ಯಮಗಳ ಮುಂದೆ ಕ್ಷಮೆ ಯಾಚಿಸಿದ್ದಾರೆ. “ನಾನೂ ಕೂಡ ಬಜರಂಗದಳದ ಕಾರ್ಯಕರ್ತನಾಗಿದ್ದವನು, ನನ್ನ ಹೇಳಿಕೆಯಿಂದ ಬಜರಂಗದಳದವರಿಗೆ ನೋವಾಗಿದ್ದರೆ ವಿಷಾದಿಸುತ್ತೇನೆ” ಎಂದರು.

“ರಾಮನಗರ ಮುಸ್ಲಿಂ ಲಾಯರ್, ಜ್ಞಾನವಾಪಿ‌ ವಿಚಾರವಾಗಿ ಅವಹೇಳನಕಾರಿ ಹೇಳಿಕೆ ನೀಡಿದ್ದನ್ನು ಸದನದಲ್ಲಿ ಪ್ರಶ್ನೆ ಮಾಡಿದ್ದೆ. ಮಂಗಳೂರಿನ ಶಿಕ್ಷಕಿ ರಾಮನ ಬಗ್ಗೆ ಅವಹೇಳನವಾಗಿ ಹೇಳಿದ್ದನ್ನು ಪ್ರಸ್ತಾಪಿಸಿದ್ದೆ, ಆ ಸಂದರ್ಭದಲ್ಲಿ ನಾನೂ ಕೂಡ ಗೃಹಸಚಿವ ಆಗಿದ್ದವನು. ನಾನೂ ಕೂಡ ಬಜರಂಗದಳ ಕಾರ್ಯಕರ್ತರ ಮೇಲೆ ಕೇಸ್ ಹಾಕಿದ್ದೆ ಅಂತ ಹೇಳಿದ್ದೆ. ಅದು ಬಜರಂಗದಳದವರ ಮನಸ್ಸಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ. ನಾನೂ ಕೂಡ ಹತ್ತು ವರ್ಷ ಬಜರಂಗದಳದ ಕಾರ್ಯಕರ್ತ ಆಗಿದ್ದೆ. ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ” ಎಂದರು.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

48 minutes ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 hour ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 hour ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 hour ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

2 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

2 hours ago