ಬೆಂಗಳೂರು: ವಿಧಾನಸಭೆ ಅಧಿವೇಶನದಲ್ಲಿ ಮಾತನಾಡುವಾಗ ಮಂಗಳೂರಿನ ಪಬ್ ದಾಳಿ ಪ್ರಕರಣದಲ್ಲಿನಾನು ಬಜರಂಗದಳದ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ ಎನ್ನುವ ಹೇಳಿಕೆ ನೀಡಿದ್ದಕ್ಕಾಗಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಕ್ಷಮೆ ಯಾಚಿಸಿದ್ದಾರೆ.
ಸದನದಲ್ಲಿ ಅಶೋಕ್ ನೀಡಿದ್ದ ಹೇಳಿಕೆ ಖಂಡಿಸಿ ವಿಹೆಚ್ಪಿ ಕಾರ್ಯದರ್ಶಿ ಶರಣ್ ಪಂಪ್ವೆಲ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ದೂರು ನೀಡಿದರು. ಅಶೋಕ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು. ಇದರ ಬೆನ್ನಲ್ಲೇ ಅಶೋಕ್ ಮಾಧ್ಯಮಗಳ ಮುಂದೆ ಕ್ಷಮೆ ಯಾಚಿಸಿದ್ದಾರೆ. “ನಾನೂ ಕೂಡ ಬಜರಂಗದಳದ ಕಾರ್ಯಕರ್ತನಾಗಿದ್ದವನು, ನನ್ನ ಹೇಳಿಕೆಯಿಂದ ಬಜರಂಗದಳದವರಿಗೆ ನೋವಾಗಿದ್ದರೆ ವಿಷಾದಿಸುತ್ತೇನೆ” ಎಂದರು.
“ರಾಮನಗರ ಮುಸ್ಲಿಂ ಲಾಯರ್, ಜ್ಞಾನವಾಪಿ ವಿಚಾರವಾಗಿ ಅವಹೇಳನಕಾರಿ ಹೇಳಿಕೆ ನೀಡಿದ್ದನ್ನು ಸದನದಲ್ಲಿ ಪ್ರಶ್ನೆ ಮಾಡಿದ್ದೆ. ಮಂಗಳೂರಿನ ಶಿಕ್ಷಕಿ ರಾಮನ ಬಗ್ಗೆ ಅವಹೇಳನವಾಗಿ ಹೇಳಿದ್ದನ್ನು ಪ್ರಸ್ತಾಪಿಸಿದ್ದೆ, ಆ ಸಂದರ್ಭದಲ್ಲಿ ನಾನೂ ಕೂಡ ಗೃಹಸಚಿವ ಆಗಿದ್ದವನು. ನಾನೂ ಕೂಡ ಬಜರಂಗದಳ ಕಾರ್ಯಕರ್ತರ ಮೇಲೆ ಕೇಸ್ ಹಾಕಿದ್ದೆ ಅಂತ ಹೇಳಿದ್ದೆ. ಅದು ಬಜರಂಗದಳದವರ ಮನಸ್ಸಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ. ನಾನೂ ಕೂಡ ಹತ್ತು ವರ್ಷ ಬಜರಂಗದಳದ ಕಾರ್ಯಕರ್ತ ಆಗಿದ್ದೆ. ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ” ಎಂದರು.
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…
ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್ಐಸಿ ಪಾಲಿಸಿಯಿಂದ ಸಿಗುವ 30…
ಲಂಡನ್ ಕೋರ್ಟ್ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…