Featured

ಬಜರಂಗದಳ ಕಾರ್ಯಕರ್ತನ ಕೊಲೆ ಪ್ರಕರಣ : ಸಿಎಂ ಬೊಮ್ಮಾಯಿ ಮಾತು ನಿಲ್ಲಿಸಿ ಕಠಿಣತೆಯನ್ನು ತೋರಿಸಲಿ : ಸರ್ಕಾರಕ್ಕೆ ಪ್ರತಾಪ್ ಸಿಂಹ ಒತ್ತಾಯ – Vishwanews24

ನಮ್ಮ ಸರ್ಕಾರ ಬಂದ ಮೇಲೂ ಕೊಲೆ ಆಗಿರೋದು ನನಗೆ ನಾಚಿಕೆ ತರುತ್ತಿದೆ..

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಾಟೆ ಆದಾಗಲೇ ಎಸ್‍ಡಿಪಿಐ, ಪಿಎಫ್‍ಐ ಮೇಲೆ ಕ್ರಮ ಕೈಗೊಂಡು ಬ್ಯಾನ್ ಮಾಡಬೇಕಿತ್ತು

ಸಿಎಂ ಬೊಮ್ಮಾಯಿ ಮಾತು ನಿಲ್ಲಿಸಿ ಕಠಿಣತೆಯನ್ನು ತೋರಿಸಲಿ..

ಘಟನೆ ಕುರಿತು ಸರ್ಕಾರ ಕಠಿಣ ಕ್ರಮ, ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಪೇಪರ್ ಸ್ಟೇಟ್ಮೆಂಟ್ ಕೊಟ್ಟರೆ ಪ್ರಯೋಜನ ಇಲ್ಲ..

ಬೆಂಗಳೂರು: ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಬೀದಿಯಲ್ಲಿ ಕಗ್ಗೊಲೆಯಾಗಿದ್ದಾರೆ. ಈ ರೀತಿ ನಮ್ಮ ಸರ್ಕಾರ ಬಂದ ಮೇಲೂ ಕೊಲೆ ಆಗಿರೋದು ನನಗೆ ನಾಚಿಕೆ ತರುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಕಿಡಿಕಾರಿದರು.

ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅವಧಿಯಲ್ಲಿ ಪ್ರತಿ ಹತ್ಯೆ ಆದಾಗಲೂ ಸಿದ್ದರಾಮಯ್ಯ ರನ್ನು ಬೈಯುತ್ತಿದ್ದೆವು. ಇವತ್ತು ನಮ್ಮದೇ ಸರ್ಕಾರ ಇದೆ. ನಮ್ಮ ಕಾರ್ಯಕರ್ತ ಒಬ್ಬ ಹತ್ಯೆ ಆಗಿದ್ದಾನೆ. ಇದು ನನಗೆ ಅತೀವ ನೋವು ತಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಹಿಜಬ್ ವಿಚಾರ ಬಂದಾಗ ರಾಜ್ಯಾದ್ಯಂತ ಅಶಾಂತಿ ವಾತಾವರಣ ನಿರ್ಮಾಣವಾಗಿತ್ತು. ಜೊತೆಗೆ ಕೋರ್ಟ್ ಮಧ್ಯಂತರ ಆದೇಶ ನೀಡಿದರೂ ಅದು ಪಾಲನೆ ಆಗುತ್ತಿಲ್ಲ. ಶಾಂತಿಗೆ ಭಂಗ ತರುವವರ ಮೇಲೆ ಹಾಗೂ 144 ಸೆಕ್ಷನ್ ಉಲ್ಲಂಘನೆ ಮಾಡಿದವರ ಮೇಲೆ ಕ್ರಮ ಆಗಲಿಲ್ಲ. ಈಗ ನಮ್ಮ ಕಾರ್ಯಕರ್ತ ಹತ್ಯೆ ಆಗಿದ್ದಾನೆ. ಘಟನೆ ಕುರಿತು ಸರ್ಕಾರ ಇನ್ಯಾವಾಗ ಕ್ರಮ ಕೈಗೊಳ್ಳುತ್ತದೆ ಎಂದು ಅವರು ಪ್ರಶ್ನಿಸಿದರು.

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಾಟೆ ಆದಾಗಲೇ ಎಸ್‍ಡಿಪಿಐ, ಪಿಎಫ್‍ಐ ಮೇಲೆ ಕ್ರಮ ಕೈಗೊಂಡು ಬ್ಯಾನ್ ಮಾಡಬೇಕಿತ್ತು. ಆಗಲೇ ಕ್ರಮ ಆಗಿದಿದ್ದರೆ ಹರ್ಷ ಸಾವನ್ನಪ್ಪುತ್ತಿರಲಿಲ್ಲ. ಘಟನೆ ಕುರಿತು ಸರ್ಕಾರ ಕಠಿಣ ಕ್ರಮ, ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಪೇಪರ್ ಸ್ಟೇಟ್ಮೆಂಟ್ ಕೊಟ್ಟರೆ ಪ್ರಯೋಜನ ಇಲ್ಲ. ಸಿಎಂ ಬೊಮ್ಮಾಯಿ ಮಾತು ನಿಲ್ಲಿಸಿ ಕಠಿಣತೆಯನ್ನು ತೋರಿಸಲಿ ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ಸಿಎಂ ಮಾತು ನಿಲ್ಲಿಸಿ ಕೃತಿಯಲ್ಲಿ ಕಠಿಣತೆ ತೋರಲಿ ಎಂದು ಆಗ್ರಹಿಸಿದ ಅವರು, ಹೈದರಾಬಾದ್‍ನಲ್ಲಿ ಅತ್ಯಾಚಾರ ಆದಾಗ ಅಪರಾಧಿಗಳನ್ನು ಗುಂಡಿಕ್ಕಿ ಕೊಂದರು. ಅದೇ ರೀತಿ ಇಲ್ಲೂ ಕ್ರಮ ಕೈಗೊಂಡರೆ ಪಾಠ ಕಲಿಯುತ್ತಾರೆ ಎಂದು ಸಲಹೆ ನೀಡಿದರು.

 

Vishwa News 24

Recent Posts

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

35 minutes ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

48 minutes ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

1 hour ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

1 hour ago

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ – ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ- vishwanews24

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…

1 hour ago

ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ: ಉಡುಪಿ ಜಿಲ್ಲಾ ಘಟಕ “ಪ್ರಭಾವಿ ಜಿಲ್ಲೆ” ಘೋಷಣೆ – vishwanews24

ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ: ಉಡುಪಿ ಜಿಲ್ಲಾ ಘಟಕ “ಪ್ರಭಾವಿ ಜಿಲ್ಲೆ” ಘೋಷಣೆ ಉಡುಪಿ: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ…

2 hours ago