ಶಿವಮೊಗ್ಗ: ಜಿಲ್ಲೆಯ ಸಾಗರ ಪಟ್ಟಣದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಬಜರಂಗದಳ ಕಾರ್ಯಕರ್ತನ ಹತ್ಯೆಗೆ ಯತ್ನಿಸಿದ ಘಟನೆ ಖಂಡಿಸಿ ಸಾಗರದಲ್ಲಿ ನಾಳೆ ಅಘೋಷಿತ ಬಂದ್ ಗೆ ಕರೆ ನೀಡಲಾಗಿದೆ.
ಸಾಗರದಲ್ಲಿ ನಾಳೆ ಬೆಳಗ್ಗೆ ಯಿಂದ ಮಧ್ಯಾಹ್ನ 2ಗಂಟೆ ವರೆಗೆ ಅಘೋಷಿತ ಬಂದ್ ಗೆ ಕರೆ ನೀಡಲಾಗಿದೆ ಎಂದು ವಿಶ್ವ ಹಿಂದು ಪರಿಷತ್ ಮುಖಂಡ ರವೀಶ್ ಹೇಳಿದ್ದಾರೆ. ಸಾಗರದ ಜನತೆ ನಾಳೆ ಸ್ವಯಂ ಪ್ರೇರಣೆಯಿಂದ ನಾಳಿನ ಬಂದ್ಗೆ ಬೆಂಬಲಿಸಬೇಕು ಎಂದು ಮನವಿ ಮಾಡಿದ್ದಾರೆ.
ಅನ್ಯಕೋಮಿನ ಯುವಕನೊಬ್ಬ ಮಚ್ಚು ಬೀಸಿರುವ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ಘಟನೆ ನಡೆದಿದೆ. ಸಮೀರ್ ಎಂಬಾತನಿಂದ ಈ ಕೃತ್ಯ ನಡೆದಿದೆ. ಸುನೀಲ್ ಮೇಲೆ ಸಮೀರ್ ಮಚ್ಚು ಬೀಸಿದ್ದಾನೆ. ದಾಳಿ ವೇಳೆ ಕೂದಲೆಳೆ ಅಂತರದಲ್ಲಿ ಸುನೀಲ್ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ. ಈ ನಿನ್ನೆ ಸಾಗರದಲ್ಲಿ ಶೌರ್ಯ ಸಂಚಲನ ಯಾತ್ರೆ ನಡೆದಿತ್ತು. ಈ ಯಾತ್ರೆಯಲ್ಲಿ ಸುನೀಲ್ ಜತೆ ಸಮೀರ್ ತೆರಳಿದ್ದರು. ಈ ವೇಳೆ ಸುನೀಲ್ ಮೇಲೆ ಮಚ್ಚು ಬೀಸಿ ಸಮೀರ್ ಪರಾರಿಯಾಗಿದ್ದಾನೆ.ಈ ಸಂಬಂಧ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…