Featured

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ : ಆರೋಪಿ ಸೈಯದ್ ನದೀಮ್‌ನನ್ನು ಬಿಡುಗಡೆ ಮಾಡಲು ನಿರಾಕರಿಸಿದ ಎನ್‌ಐಎ ನ್ಯಾಯಾಲಯ – Vishwanews24

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ : ಆರೋಪಿ ಸೈಯದ್ ನದೀಮ್‌ನನ್ನು ಬಿಡುಗಡೆ ಮಾಡಲು ನಿರಾಕರಿಸಿದ ಎನ್‌ಐಎ ನ್ಯಾಯಾಲಯ

ಬೆಂಗಳೂರು: 2022ರ ಫೆಬ್ರುವರಿ 20ರಂದು ಶಿವಮೊಗ್ಗದಲ್ಲಿ ಬಜರಂಗ ದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಆರೋಪಿ ಸೈಯದ್ ನದೀಮ್‌ನನ್ನು ಬಿಡುಗಡೆ ಮಾಡಲು ಎನ್‌ಐಎ ವಿಶೇಷ ನ್ಯಾಯಾಲಯ ನಿರಾಕರಿಸಿದೆ. ಹತ್ಯೆಗೆ ಸಂಬಂಧಿಸಿದಂತೆ 10 ಆರೋಪಿಗಳಲ್ಲಿ ನದೀಮ್ ಆರೋಪಿ ನಂ. 9 ಆಗಿದ್ದಾನೆ.

ತನಿಖೆಯ ಸಮಯದಲ್ಲಿ ಸಂಗ್ರಹಿಸಲಾದ ಸಾಕ್ಷಿಗಳ ಹೇಳಿಕೆಗಳು ಮತ್ತು ಇತರ ವಸ್ತುಗಳು ಅಪರಾಧದಲ್ಲಿ ನದೀಮ್ ಭಾಗಿಯಾಗಿರುವುದನ್ನು ತೋರಿಸುತ್ತವೆ ಎಂದು ನ್ಯಾಯಾಧೀಶ ಗಂಗಾಧರ ಸಿಎಂ ತಿಳಿಸಿದರು.

‘ಹರ್ಷ ಅವರ ಹತ್ಯೆಯ ನಂತರ ಅವರನ್ನು ಕಾನೂನಿನ ಕುಣಿಕೆಯಿಂದ ತಪ್ಪಿಸುವ ಉದ್ದೇಶದಿಂದ ನದೀಮ್ ಅವರು ನಂ. 1, 3 ಮತ್ತು 5ನೇ ಆರೋಪಿಗಳಾದ ರಿಹಾನ್ ಶರೀಫ್, ಆಸಿಫುಲ್ಲಾ ಖಾನ್ ಅಲಿಯಾಸ್ ಚಿಕು ಮತ್ತು ಸೈಯದ್ ಫರೋಜ್ ಅಲಿಯಾಸ್ ನಿಹಾಲ್ ಅವರಿಗೆ ಆಶ್ರಯ ನೀಡಿದ್ದರು. ಆರೋಪಿಗಳು ಹತ್ಯೆ ಮಾಡಿರುವುದು ಅವರಿಗೆ ಚೆನ್ನಾಗಿ ತಿಳಿದಿತ್ತು. ಈ ಹಿನ್ನೆಲೆಯಲ್ಲಿ, ನದೀಮ್ ವಿರುದ್ಧ ಅಪರಾಧದ ಆರೋಪ ಹೊರಿಸಲು ಪ್ರಾಸಿಕ್ಯೂಷನ್ ಸಾಕಷ್ಟು ಪುರಾವೆಗಳನ್ನು ಒದಗಿಸಿದೆ’ ಎಂದು ನ್ಯಾಯಾಲಯ ಹೇಳಿದೆ.

ತನಿಖಾಧಿಕಾರಿಯು ಸಂಗ್ರಹಿಸಿದ ಸಾಕ್ಷ್ಯವು ಆಪಾದಿತ ಅಪರಾಧದಲ್ಲಿ ನದೀಮ್‌ ಭಾಗಿಯಾಗಿರುವುದನ್ನು ಸ್ಪಷ್ಟವಾಗಿ ಸೂಚಿಸುತ್ತದೆ. ಅವರ ವಿರುದ್ಧ ವಿಚಾರಣೆ ಮುಂದುವರಿಯಲು ಪ್ರಾಸಿಕ್ಯೂಷನ್ ಬಲವಾದ ಪ್ರಕರಣವನ್ನು ಪ್ರಸ್ತುತಪಡಿಸಿದೆ. ಪರಿಣಾಮವಾಗಿ, ನದೀಮ್ ಅವರ ಅರ್ಜಿಯನ್ನು ತಿರಸ್ಕರಿಸಲಾಗಿದೆ.

ಪ್ರಕರಣದಲ್ಲಿ ತನ್ನನ್ನು ಪೊಲೀಸರು ತಪ್ಪಾಗಿ ಸಿಲುಕಿಸಿದ್ದಾರೆ ಎಂದು ನದೀಮ್ ಆರೋಪಿಸಿದ್ದಾರೆ. ಆದಾಗ್ಯೂ, ಮೂವರು ಆರೋಪಿಗಳು ಹರ್ಷನ ಹತ್ಯೆ ಮಾಡಿದ ನಂತರ ಬಂಧನದಿಂದ ತಪ್ಪಿಸಿಕೊಳ್ಳಲು ನದೀಮ್ ಸಹಾಯದಿಂದ ಆಶ್ರಯ ಪಡೆದಿದ್ದರು ಎಂದು ಪ್ರಾಸಿಕ್ಯೂಷನ್ ಹೇಳಿದೆ. ಕೊಲೆಯಾದ ಬಳಿಕ ಮೂವರೂ ಆರೋಪಿಗಳನ್ನು ಶಿವಮೊಗ್ಗದ ಜೆಪಿ ನಗರದ ಪಾಳುಬಿದ್ದ ಕಟ್ಟಡಕ್ಕೆ ಕರೆದೊಯ್ದು, ರಕ್ತದಲ್ಲಿ ತೊಯ್ದಿದ್ದ ಬಟ್ಟೆ ಬದಲಿಸಲು ಬಟ್ಟೆ ಹಾಗೂ ಆಹಾರವನ್ನೂ ನದೀಮ್ ನೀಡಿದ್ದರು ಎನ್ನಲಾಗಿದೆ.

 

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

3 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

3 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

3 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

3 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago