ಮಂಗಳೂರು: ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಂಗಳೂರು ಆಸ್ಪತ್ರೆಗೆ ಶಿಫ್ಟ್ ಆಗಿರುವ ಗಾಯಾಳುವಿನ ಆರೋಗ್ಯವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಚಾರಿಸಿದ್ದಾರೆ.
ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಇಂದು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಮತ್ತು ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದರು. ಈ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಮಹೇಂದ್ರರನ್ನು ಪುತ್ತೂರು ಆಸ್ಪತ್ರೆಯಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಮಂಗಳೂರಿಗೆ ಶಿಫ್ಟ್ ಆಗುತ್ತಿದ್ದಂತೆಯೇ ನಳಿನ್ ಕುಮಾರ್ ಕಟೀಲ್ ಅವರು ಗಾಯಾಳು ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ತೆರಳಿದ್ದಾರೆ. ಇನ್ನು ಸುದ್ದಿ ತಿಳಿದು ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿದ ರಾಜೇಶ್ ನಾಯ್ಕ್ ಕೂಡ ಕಟೀಲ್ ಗೆ ಸಾಥ್ ನೀಡಿದರು.
ಫಲಿತಾಂಶದ ದಿನದ ಸಂಭ್ರಮಾಚರಣೆ ವೇಳೆ ನಡೆದಿದ್ದ ಗಲಾಟೆಗೆ ಪ್ರತೀಕಾರ ಶಂಕೆ ವ್ಯಕ್ತವಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ಎನ್ನಲಾದ ತಂಡದಿಂದ ದಾಳಿ ನಡೆದಿರುವ ಮಾಹಿತಿ ಸಿಕ್ಕಿತ್ತು. ಪೆರಾಜೆ ಬಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಮೇಲೆ ದಾಳಿಯಾಗಿತ್ತು. ಮಾಣಿ ಜಂಕ್ಷನ್ ನಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ಓಮ್ನಿ ಕಾರಿನಲ್ಲಿ ಬಂದ ತಂಡ ಸ್ಕೂಟರ್ ಗೆ ಡಿಕ್ಕಿ ಹೊಡೆದು ಕೃತ್ಯ ಎಸಗಲಾಗಿತ್ತು. ಘಟನೆಯಿಂದ ಯುವಕರ ಕಾಲು ಮತ್ತು ತಲೆಯ ಭಾಗಕ್ಕೆ ಗಾಯಗಳಾಗಿವೆ.
ಮಂಗಳೂರು ನಿವಾಸಿ ರಾಕೇಶ್, ಮಾಣಿ ಮಂಜುನಾಥ್ ಯಾನೆ ಮಂಜು, ಪ್ರವೀಣ್ ನಾಯ್ಕ್ ಯಾನೆ ಮಹಾಲಿಂಗ ಮತ್ತಿತರ ತಂಡ ಹಲ್ಲೆ ನಡೆಸಿದ ಬಗ್ಗೆ ದೂರು ನೀಡಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರ ತಂಡ ಭೇಟಿ ನೀಡಿ ತನಿಖೆ ನಡೆಸಿದೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…