ಬಜರಂಗ ದಳದ ತಂಟೆಗೆ ಬಂದರೆ ತಲೆ ಕಡಿಯಲು ಸಿದ್ದ: ಮಿಥುನ್ ರೈಗೆ ಕೊಲೆ ಬೆದರಿಕೆ -Vishwanews24
ಮಂಗಳೂರು: ‘ಮಿಥುನ್ ರೈ ಬಜರಂಗಳದ ಸುದ್ದಿಗೆ ಬಂದರೆ ತಲೆ ಕಡಿಯಲು ಸಿದ್ದ ಎಂದು ಕೇಸರಿ ಬಾವುಟ ಹಿಡಿದುಕೊಂಡು ಯುವಕನೊಬ್ಬ ಬಿಜೆಪಿ ವಿಜಯೋತ್ಸವದ ವೇಳೆ ಹೇಳಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮೇ 23ರಂದು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಗೆಲುವು ಸಾಧಿಸಿದ ಬಳಿಕ ಬಡಕಬೈಲ್ ಸಮಿತಿಯ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವವನ್ನು ಆಚರಿಸಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರು ಯೂತ್ ಕಾಂಗ್ರಸೆ ಜಿಲ್ಲಾಧ್ಯಕ್ಷ ಮಿಥುನ್ ರೈಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆಯೊಟ್ಟಿದ್ದಾರೆ.
ವೀಡಿಯೋದಲ್ಲೇನಿದೆ?:
“ಮಿಥುನ್ ರೈ ಬಜರಂಗ ದಳದ ತಂಟೆಗೆ ಬಂದರೆ ಕೈ, ಕಾಲನ್ನು ತೆಗೆಯುತ್ತೇವೆ. ಅಗತ್ಯವಿದ್ದರೆ ತಲೆಯನ್ನು ತೆಗೆಯುತ್ತೇವೆ” ಎಂಬ ಕೊಲೆ ಎಚ್ಚರಿಕೆಯ ಸಂದೇಶವೊಂದನ್ನು ಬಿಜೆಪಿ ಕಾರ್ಯಕರ್ತನೋರ್ವ ಕೈಯಲ್ಲಿ ಕೇಸರಿ ಬಾವುಟ ಹಿಡಿದು, ತಲೆಗೆ ಕೇಸರಿಪಟ್ಟಿ ಕಟ್ಟಿ ಬೊಬ್ಬೆಹಾಕುತ್ತಿದ್ದು, ಇದನ್ನು ಉಳಿದ ಬಿಜೆಪಿ ಕಾರ್ಯಕರ್ತರೂ ಕೂಡಾ ಹೇಳುತ್ತಿರುವುದು ವೀಡಿಯೋದಲ್ಲಿ ಕಂಡು ಬರುತ್ತದೆ.
ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
