ಮಂಗಳೂರು: ‘ಮಿಥುನ್ ರೈ ಬಜರಂಗಳದ ಸುದ್ದಿಗೆ ಬಂದರೆ ತಲೆ ಕಡಿಯಲು ಸಿದ್ದ ಎಂದು ಕೇಸರಿ ಬಾವುಟ ಹಿಡಿದುಕೊಂಡು ಯುವಕನೊಬ್ಬ ಬಿಜೆಪಿ ವಿಜಯೋತ್ಸವದ ವೇಳೆ ಹೇಳಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮೇ 23ರಂದು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಗೆಲುವು ಸಾಧಿಸಿದ ಬಳಿಕ ಬಡಕಬೈಲ್ ಸಮಿತಿಯ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವವನ್ನು ಆಚರಿಸಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರು ಯೂತ್ ಕಾಂಗ್ರಸೆ ಜಿಲ್ಲಾಧ್ಯಕ್ಷ ಮಿಥುನ್ ರೈಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆಯೊಟ್ಟಿದ್ದಾರೆ.
ವೀಡಿಯೋದಲ್ಲೇನಿದೆ?:
“ಮಿಥುನ್ ರೈ ಬಜರಂಗ ದಳದ ತಂಟೆಗೆ ಬಂದರೆ ಕೈ, ಕಾಲನ್ನು ತೆಗೆಯುತ್ತೇವೆ. ಅಗತ್ಯವಿದ್ದರೆ ತಲೆಯನ್ನು ತೆಗೆಯುತ್ತೇವೆ” ಎಂಬ ಕೊಲೆ ಎಚ್ಚರಿಕೆಯ ಸಂದೇಶವೊಂದನ್ನು ಬಿಜೆಪಿ ಕಾರ್ಯಕರ್ತನೋರ್ವ ಕೈಯಲ್ಲಿ ಕೇಸರಿ ಬಾವುಟ ಹಿಡಿದು, ತಲೆಗೆ ಕೇಸರಿಪಟ್ಟಿ ಕಟ್ಟಿ ಬೊಬ್ಬೆಹಾಕುತ್ತಿದ್ದು, ಇದನ್ನು ಉಳಿದ ಬಿಜೆಪಿ ಕಾರ್ಯಕರ್ತರೂ ಕೂಡಾ ಹೇಳುತ್ತಿರುವುದು ವೀಡಿಯೋದಲ್ಲಿ ಕಂಡು ಬರುತ್ತದೆ.
ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…