Featured

ಬಜೆಟ್ ಅಧಿವೇಶನ ಬಳಿಕ ಜನತಾ ಜಲಧಾರೆಯ ಗಂಗಾ ರಥಯಾತ್ರೆ ಆರಂಭ : ಎಚ್ ಡಿಕೆ – Vishwanews24

ಬಜೆಟ್ ಅಧಿವೇಶನ ಬಳಿಕ ಜನತಾ ಜಲಧಾರೆಯ ಗಂಗಾ ರಥಯಾತ್ರೆ ಆರಂಭ : ಎಚ್ ಡಿಕೆ – Vishwanews24

ಬೆಂಗಳೂರು: ಮೇಕೆದಾಟು ಪಾದಯಾತ್ರೆ ಪೂರ್ಣಗೊಂಡ ಬೆನ್ನಲ್ಲೇ ಜೆಡಿಎಸ್‌ನಿಂದ ‘ಜನತಾ ಜಲಧಾರೆಯ ಗಂಗಾ ರಥಯಾತ್ರೆ’ ನಡೆಸಲು ನಿರ್ಧರಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಥಯಾತ್ರೆಗೆ ಈ ಹಿಂದೆಯೇ ಸಿದ್ಧತೆ ನಡೆದಿತ್ತಾದರೂ ಕೋವಿಡ್ ಮೂರನೇ ಅಲೆ ತೀವ್ರತೆ ಹಿನ್ನೆಲೆಯಲ್ಲಿ ಮುಂದೂಡಿಕೆ ಮಾಡಲಾಗಿತ್ತು. ಇದೀಗ ಬಜೆಟ್ ಅಧಿವೇಶನ ನಡೆಯುತ್ತಿದ್ದು, ಅದು ಮುಗಿದ ತತ್ ಕ್ಷಣ ರಥಯಾತ್ರೆ ಆರಂಭಗೊಳ್ಳಲಿದೆ ಎಂದರು.

ಈ ಸಂಬಂಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು 4 ಜಿಲ್ಲೆಗಳ ಶಾಸಕರು, ಮುಖಂಡರ ಜತೆ ಮಹತ್ವದ ಸಭೆ ನಡೆಸಿದರು. ಕಣಕಂಬಿ, ಮಹದಾಯಿ, ಕೃಷ್ಣಾ ಜಲಾನಯನ ಪ್ರದೇಶ, ಮಲಪ್ರಭಾ, ಘಟಪ್ರಭಾ ಜಲಾನಯನ ಪ್ರದೇಶದ ಶಾಸಕರು, ಮುಖಂಡರ ಜತೆ ಸಮಾಲೋಚಿಸಿದರು.

ಇದನ್ನೂ ಓದಿ :

ರಾಜ್ಯದ ನೀರಾವರಿ ಸಮಸ್ಯೆಗೆ ಜೆಡಿಎಸ್ ಯಾವ ರೀತಿ ಪರಿಹಾರ ನೀಡಲಿದೆ ಎಂಬುದನ್ನು ಜನಸಾಮಾನ್ಯಗೆ ವಿವರಿಸಿ ಹೇಳಬೇಕು. ಬೆಳಗಾವಿಯಲ್ಲಿ ಪಕ್ಷಕ್ಕೆ ಉತ್ತಮ ಬೆಂಬಲವಿದೆ. ಇಲ್ಲಿನ ಎಲ್ಲ ತಾಲೂಕು ಕೇಂದ್ರಗಳಲ್ಲಿ ರಥಯಾತ್ರೆ ಹಾದು ಹೋಗಬೇಕು. ಪಕ್ಷದ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದವರು ಇದೇ ವೇಳೆ ಸೂಚಿಸಿದರು.

ಮಹದಾಯಿ ನದಿ ನೀರು ಹಂಚಿಕೆಯಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು. ಜನರಿಗೆ ನೀರಿನ ವಿಚಾರದಲ್ಲಿ ಆಗಿರುವ ಅನ್ಯಾಯವನ್ನು ಜೆಡಿಎಸ್ ಅಧಿಕಾರಕ್ಕೆ ಬಂದಲ್ಲಿ ಹೇಗೆ ಪರಿಹರಿಸಲಿದೆ ಎಂಬುದನ್ನೂ ಮನವರಿಕೆ ಮಾಡಿಕೊಡಬೇಕು. ಎಲ್ಲಾ ಸಿದ್ಧತೆಗಳನ್ನು ತತ್ ಕ್ಷಣವೇ ಮುಗಿಸಿಕೊಳ್ಳಿ. ಶೀಘ್ರ ರಥಯಾತ್ರೆಯ ದಿನಾಂಕವನ್ನು ಪ್ರಕಟಿಸಲಾಗುವುದು ಎಂದರು.

ಪಕ್ಷದ ರಾಜ್ಯಾಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ, ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಬಂಡೆಪ್ಪ ಖಾಶೆಂಪೂರ್, ವಿಧಾನ ಪರಿಷತ್ ಸದಸ್ಯ ಕೆ.ಎನ್. ತಿಪ್ಪೇಸ್ವಾಮಿ, ಹಿರಿಯ ಶಾಸಕ ವೆಂಕಟ ರಾವ್ ನಾಡಗೌಡ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ :

 

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

18 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

19 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

19 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

20 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

21 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

21 hours ago