ಬೆಂಗಳೂರು: ಮೇಕೆದಾಟು ಪಾದಯಾತ್ರೆ ಪೂರ್ಣಗೊಂಡ ಬೆನ್ನಲ್ಲೇ ಜೆಡಿಎಸ್ನಿಂದ ‘ಜನತಾ ಜಲಧಾರೆಯ ಗಂಗಾ ರಥಯಾತ್ರೆ’ ನಡೆಸಲು ನಿರ್ಧರಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಥಯಾತ್ರೆಗೆ ಈ ಹಿಂದೆಯೇ ಸಿದ್ಧತೆ ನಡೆದಿತ್ತಾದರೂ ಕೋವಿಡ್ ಮೂರನೇ ಅಲೆ ತೀವ್ರತೆ ಹಿನ್ನೆಲೆಯಲ್ಲಿ ಮುಂದೂಡಿಕೆ ಮಾಡಲಾಗಿತ್ತು. ಇದೀಗ ಬಜೆಟ್ ಅಧಿವೇಶನ ನಡೆಯುತ್ತಿದ್ದು, ಅದು ಮುಗಿದ ತತ್ ಕ್ಷಣ ರಥಯಾತ್ರೆ ಆರಂಭಗೊಳ್ಳಲಿದೆ ಎಂದರು.
ಈ ಸಂಬಂಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು 4 ಜಿಲ್ಲೆಗಳ ಶಾಸಕರು, ಮುಖಂಡರ ಜತೆ ಮಹತ್ವದ ಸಭೆ ನಡೆಸಿದರು. ಕಣಕಂಬಿ, ಮಹದಾಯಿ, ಕೃಷ್ಣಾ ಜಲಾನಯನ ಪ್ರದೇಶ, ಮಲಪ್ರಭಾ, ಘಟಪ್ರಭಾ ಜಲಾನಯನ ಪ್ರದೇಶದ ಶಾಸಕರು, ಮುಖಂಡರ ಜತೆ ಸಮಾಲೋಚಿಸಿದರು.
ಇದನ್ನೂ ಓದಿ :
ರಾಜ್ಯದ ನೀರಾವರಿ ಸಮಸ್ಯೆಗೆ ಜೆಡಿಎಸ್ ಯಾವ ರೀತಿ ಪರಿಹಾರ ನೀಡಲಿದೆ ಎಂಬುದನ್ನು ಜನಸಾಮಾನ್ಯಗೆ ವಿವರಿಸಿ ಹೇಳಬೇಕು. ಬೆಳಗಾವಿಯಲ್ಲಿ ಪಕ್ಷಕ್ಕೆ ಉತ್ತಮ ಬೆಂಬಲವಿದೆ. ಇಲ್ಲಿನ ಎಲ್ಲ ತಾಲೂಕು ಕೇಂದ್ರಗಳಲ್ಲಿ ರಥಯಾತ್ರೆ ಹಾದು ಹೋಗಬೇಕು. ಪಕ್ಷದ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದವರು ಇದೇ ವೇಳೆ ಸೂಚಿಸಿದರು.
ಮಹದಾಯಿ ನದಿ ನೀರು ಹಂಚಿಕೆಯಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು. ಜನರಿಗೆ ನೀರಿನ ವಿಚಾರದಲ್ಲಿ ಆಗಿರುವ ಅನ್ಯಾಯವನ್ನು ಜೆಡಿಎಸ್ ಅಧಿಕಾರಕ್ಕೆ ಬಂದಲ್ಲಿ ಹೇಗೆ ಪರಿಹರಿಸಲಿದೆ ಎಂಬುದನ್ನೂ ಮನವರಿಕೆ ಮಾಡಿಕೊಡಬೇಕು. ಎಲ್ಲಾ ಸಿದ್ಧತೆಗಳನ್ನು ತತ್ ಕ್ಷಣವೇ ಮುಗಿಸಿಕೊಳ್ಳಿ. ಶೀಘ್ರ ರಥಯಾತ್ರೆಯ ದಿನಾಂಕವನ್ನು ಪ್ರಕಟಿಸಲಾಗುವುದು ಎಂದರು.
ಪಕ್ಷದ ರಾಜ್ಯಾಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ, ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಬಂಡೆಪ್ಪ ಖಾಶೆಂಪೂರ್, ವಿಧಾನ ಪರಿಷತ್ ಸದಸ್ಯ ಕೆ.ಎನ್. ತಿಪ್ಪೇಸ್ವಾಮಿ, ಹಿರಿಯ ಶಾಸಕ ವೆಂಕಟ ರಾವ್ ನಾಡಗೌಡ ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ :
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…