ನವದೆಹಲಿ: ಜಿಎಸ್ಟಿ (ಸರಕು ಮತ್ತು ಸೇವಾ ತೆರಿಗೆ) ಜಾರಿ ಐತಿಹಾಸಿಕ ಕ್ರಮವಾಗಿದ್ದು, ಅದನ್ನು ರೂಪಿಸಿದ ಅರುಣ್ ಜೇಟ್ಲಿ ಅವರಿಗೆ ನನ್ನ ನಮನ ಸಲ್ಲಿಸುತ್ತೇನೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
ಇಂದು ಸಂಸತ್ ನಲ್ಲಿ 2020ನೇ ಸಾಲಿನ ಆಯವ್ಯಯ ಪಟ್ಟಿ ಓದುತ್ತಿರುವ ನಿರ್ಮಲಾ ಸೀತಾರಾಮನ್ ಅವರು, ಜನರ ಖರೀದಿ ಸಾಮರ್ಥ್ಯ ವೃದ್ಧಿಸುವ ಬಜೆಟ್ ಇದು. ತಂತ್ರಜ್ಞಾನದ ನೆರವಿನಿಂದ ಜನರ ಬದುಕು ಸುಧಾರಿಸಲು ನಾವು ಬದ್ಧರಾಗಿದ್ದೇವೆ. ಸಮಾಜದ ಎಲ್ಲ ವರ್ಗಗಳ ಆಶೋತ್ತರಗಳನ್ನು ಬಿಂಬಿಸುವ ಬಜೆಟ್ ಇದು. 2014–19ರ ಅವಧಿಯಲ್ಲಿ ನಮ್ಮ ಸರ್ಕಾರವು ಅಡಳಿತದಲ್ಲಿ ಬದಲಾವಣೆ ತಂದಿತ್ತು. ಮೂಲಭೂತ ವ್ಯವಸ್ಥೆಯ ಬದಲಾವಣೆ ಮತ್ತು ಎಲ್ಲರನ್ನೂ ಒಳಗೊಳ್ಳುವ ಬೆಳವಣಿಗೆಗೆ ನಾವು ಗಮನ ಕೊಟ್ಟೆವು. ಹಣದುಬ್ಬರ ನಿಯಂತ್ರಣದಲ್ಲಿಡುವ ಜೊತೆಗೆ ಬ್ಯಾಂಕ್ಗಳ ಕೆಟ್ಟ ಸಾಲದ ಬಗ್ಗೆ ಗಮನ ನೀಡಲಾಯಿತು. ಅಂತೆಯೇ ತಮ್ಮ ಭಾಷಣದಲ್ಲಿ ಮಾಜಿ ವಿತ್ತ ಸಚಿವ, ದಿವಂಗತ ಅರುಣ್ ಜೇಟ್ಲಿ ಅವರನ್ನು ನೆನೆದರು.
ಹೆಬ್ರಿ: ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಏಣಿಯಿಂದ ಬಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾವು ಹೆಬ್ರಿ: ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಏಣಿಯಿಂದ…
ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ ಸಾಧ್ಯತೆ ; ಕರಾವಳಿ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ…
ಮೇ 16ರಂದು ಇತಿಹಾಸ ಪ್ರಸಿದ್ದ ಕಾಪು "ಪಿಲಿಕೋಲ" ಕಾಪು: ತನ್ನದೇ ಆದ ವಿಶಿಷ್ಟ- ವೈಶಿಷ್ಟ್ಯತೆಗಳಿಂದಾಗಿ ಕರಾವಳಿ ಜಿಲ್ಲೆಗಳು ಮಾತ್ರವಲ್ಲದೇ ದೇಶ-ವಿದೇಶಗಳಲ್ಲಿಯೂ…
ಕಾಪು ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ದೋಣಿ ಸ್ಥಳೀಯ ನಾಡದೋಣಿ ಗೆ ಡಿಕ್ಕಿ ಪ್ರಕರಣ: ಎಸ್ ಡಿ ಪಿ ಐ ಖಂಡನೆ…
ಕಾರ್ಕಳ : ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ: ರಾಜ್ಯ ಸರ್ಕಾರಕ್ಕೆ ಉದಯ ಶೆಟ್ಟಿ ಮುನಿಯಾಲು ಧನ್ಯವಾದ ಸಲ್ಲಿಕೆ ಕಾರ್ಕಳದಲ್ಲಿ…
ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ ಡೀಸೆಲ್ ಪೂರೈಕೆಗೆ ಕೇಂದ್ರ ಸಚಿವರಿಗೆ ಮನವಿ ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ…